ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಾಳ ಕ್ಯಾಂಪ್ನಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ್ದು, ಗುಡಿಸಲು ಸುಟ್ಟು ಕರಕಲಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವರು ಶರಣಬಸಪ್ಪಗೌಡ ದರ್ಶನಾಪೂರ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ವೈಯಕ್ತಿಕ ಪರಿಹಾರ ನೀಡಿದ ಸಚಿವರು ಶರಣಬಸಪ್ಪ ದರ್ಶನಾಪುರ ಅವರು, ಯಾವುದೇ ರೀತಿಯಿಂದ ಆತಂಕಕ್ಕೆ ಒಳಗಾಗಬೇಡಿ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನಿಮಗೆ ಪರಿಹಾರ ಒದಗಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.