ಯಾದಗಿರಿ | ಕೊಡಲಿಯಿಂದ ಕೊಚ್ಚಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ!

Date:

ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಮಕ್ಕಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ನಡೆದಿದೆ.

- Advertisement -

ಹಲ್ಲೆಯಿಂದಾಗಿ ಸಾನ್ವಿ (5) ಮತ್ತು ಭಾರ್ಗವ್ (3) ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗ ಹೇಮಂತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೊಲೆಗೈದ ಶರಣಪ್ಪ ಹಣಮಂತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶರಣಪ್ಪ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು. ಬುಧವಾರ ರಾತ್ರಿಯೂ ಜಗಳ ನಡೆದಿದ್ದು, ಕೋಪಗೊಂಡಿದ್ದ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪಿಎಸ್‌ಐ ಹನುಮಂತ ಭಂಕಲಗಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ತನ್ನ ಪತ್ನಿಯ ಶೀಲ ಶಂಕಿಸಿ ಆಗಾಗ್ಗೆ ಜಗಳ ತೆಗೆಯುತ್ತಿದ್ದ ಶರಣಪ್ಪ, ಮೂವರು ಮಕ್ಕಳು ತನ್ನವರಲ್ಲ ಎಂದು ವಾದಿಸುತ್ತಿದ್ದ. ಇದರಿಂದ ಬೇಸತ್ತ ಪತ್ನಿಯು ಒಂದೂವರೆ ವರ್ಷ ತವರು ಮನೆಯಲ್ಲಿ ಇದ್ದರು. 15 ದಿನಗಳ ಹಿಂದೆಯಷ್ಟೇ ಗಂಡನ ಮನೆಗೆ ಬಂದಿದ್ದರು. ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ಸಮೀಪದ ಬೆಟ್ಟದಲ್ಲಿ ಅವಿತುಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...