ಯಾದಗಿರಿ | ನಾರಾಯಣಪುರ ಡ್ಯಾಂನಿಂದ ಕೃಷಿಗೆ ನೀರು ಹರಿಸುವಂತೆ ಒತ್ತಾಯ

Date:

Advertisements

ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯದಿಂದ ಮಂಗಾರು ಬೆಳೆಗೆ ವಾರಬಂದಿ ಮಾಡದೇ ನಿರಂತರ ನೀರು ಹರಿಸಬೇಕೆಂದು ಜೆಡಿಎಸ್‌ ಮುಖಂಡರು ಒತ್ತಾಯಿಸಿದ್ದಾರೆ.

ಯಾದಗಿರಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಜೆಡಿಎಸ್‌ ಕಾರ್ಯಕರ್ತರು, “ಮುಂಗಾರು ಬೆಳೆಗೆ ಇಂದಿನಿಂದ ವಾರಬಂದಿ ಪದ್ಧತಿಯಲ್ಲಿ ಕಾಲುವೆಗಳಿಂದ ರೈತರ ಹೊಲ ಗದ್ದೆಗಳಿಗೆ ನೀರು ಹರಿಸಲಾಗುವುದು ಎಂಬ ಮಾಹಿತಿ ಬಂದಿದೆ. ಇದರಿಂದ ರೈತರು ಗಾಬರಿಯಾಗಿದ್ದಾರೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭತ್ತದ ಸಸಿ ನಾಟಿ ಮಾಡುವ ಹಂತದಲ್ಲಿದ್ದು, ವಾರಬಂದಿ ಪದ್ದತಿಯಲ್ಲಿ ನೀರು ಕೊಟ್ಟರೆ, ನಾಟಿ ಕಾರ್ಯ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ವಾರಬಂದಿ ಪದ್ದತಿಯನ್ನು ಕೈಬಿಟ್ಟು, ನಿರಂತರವಾಗಿ ನೀರು ಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ದೇವಿಂದ್ರಪ್ಪ ಬಳಿಚಕ್ರ ದೊರೆ, ಹೊನ್ನಪ್ಪ ಪುಟ್ಟಿ ಗೌಡ ಹಿರಿಯ ರೈತ ಕಕ್ಕೇರಾ, ದೇವಿಂದ್ರಪ್ಪ ಕಾಮನಟ್ಟಗಿ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X