ಕೆಕೆಆರ್‌ಡಿಬಿ ಹಣ ದುರ್ಬಳಕೆ | ರಾಯಚೂರು ವಿವಿ ಆಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

Date:

Advertisements

ಕೆಕೆಆರ್‌ಡಿಬಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ರಾಯಚೂರು ವಿಶ್ವ ವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಕೆಆರ್‌ಡಿಬಿ ಯೋಜನೆಯಡಿ ವಿಶ್ವವಿದ್ಯಾನಿಲಯಕ್ಕೆ 2,79 ಕೋಟಿ ರೂ. ಅನುದಾನ ನೀಡಲಾಗಿತ್ತು. ಆ ಅನುದಾನದಲ್ಲಿ ಸಿಸಿ ಕ್ಯಾಮೆರಾ, ಸಿಸಿ ಟಿವಿ ಹಾಗೂ ಸ್ಟಾರ್ಟ ಕ್ಲಾಸ್‌ಗೆ ಸಂಬಂಧಿಸಿದಂತೆ ಉಪಕರಣಗಳನ್ನು ಖರೀದಿಸುವಾಗ ವಿಶ್ವವಿದ್ಯಾಲಯದ ಅಧಿಕಾರಿಗಳು ಮಾರುಕಟ್ಟೆ ದರಕ್ಕಿಂತ 4-5 ಪಟ್ಟು ಹೆಚ್ಚು ದರಕ್ಕೆ ಖರೀದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ವಿಶ್ವವಿದ್ಯಾಲಯ ಒಂದೇ ಇದ್ದು, ಅಭಿವೃದ್ಧಿಗಾಗಿ ಸರ್ಕಾರ ಅನುದಾನ ನೀಡಿದರೆ, ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಪರಿಣಾಮ ಈ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ” ಎಂದು ದೂರಿದ್ದಾರೆ.

Advertisements

“ಭ್ರಷ್ಟಾಚಾರ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟ ಕಾಪಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಶೀನಾಥ ನಾಟೇಕಾರ್ ಜಿಲ್ಲಾಧ್ಯಕ್ಷರು ಯಾದಗಿರಿ,ರಾಹುಲ್ ಕೊಲ್ಲೂರ್ ಜಿಲ್ಲಾ.ಸಂ.ಕಾರ್ಯದರ್ಶಿ ಯಾದಗಿರಿ,ಮಲ್ಲಿಕಾರ್ಜುನ ಕುಮನೂರು, ಮಲ್ಲಪ್ಪ ಕುರಕುಂದಿ, ಸಾಬಣ್ಣ ಹಂಚಿನಾಳ, ಭೀಮರಾಯ ಕ್ಯಾತ್ನಾಳ್, ಇತರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X