ಯಾದಗಿರಿ | ಸಾವೂರು ಗ್ರಾಮದ ಸರ್ಕಾರಿ ಶಾಲೆಗಿಲ್ಲ ಮೂಲ ಸೌಕರ್ಯ

Date:

Advertisements

ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ ಸಾವೂರು ಗ್ರಾಮದ ಸರ್ಕಾರಿ ಶಾಲೆ ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿದೆ.

ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ, ಗ್ರಂಥಾಲಯ, ಆಟದ ಮೈದಾನ, ವೈದ್ಯಕೀಯ ಸೌಲಭ್ಯಗಳು, ಉತ್ತಮ ವಾತಾವರಣ ಹಾಗೂ ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು ಇರಬೇಕು. ಆದರೆ, ಸಾವೂರು ಶಾಲೆಯಲ್ಲಿ ಈ ಯಾವ ಸೌಲಭ್ಯಗಳು ಇಲ್ಲ. ಹೀಗಾಗಿ, ಕಲಿಕೆಗೆ ಪೂರಕ ವಾತಾವರಣವೇ ಇಲ್ಲದೆ, ಮಕ್ಕಳು ಕಲಿಯುತ್ತಿದ್ದಾರೆ.

ಶಾಲೆಯ ಆವರಣದಲ್ಲಿ ಬೊರವೆಲ್ ಇದ್ದು, ಅದರಲ್ಲಿ ನೀರು ತುಂಬಾ ಗಡುಸಾಗಿ ಬರುತ್ತದೆ. ಆ ನೀರು ಕುಡಿಯಲು ಯೋಗ್ಯವಿಲ್ಲವೆಂದು ಹೇಳಲಾಗಿದೆ. ಆದರೂ, ಬೇರೆ ವ್ಯವಸ್ಥೆ ಇಲ್ಲದೆ, ಆ ನೀರನ್ನೇ ಮಕ್ಕಳು ಕುಡಿಯುತ್ತಿದ್ದಾರೆ. ಪರಿಣಾಮ, ಅನಾರೋಗ್ಯಕ್ಕೆ ತುತ್ತಾಗುವ ಆತಂಕವೂ ಇದೆ. ಕೆಲವು ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಬೇರೆಡೇ ಹೋಗಿ ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಮೂಲೆಗುಂಪಾಗಿರುವ ಬೊಮ್ಮಾಯಿ ತಮ್ಮ ಅಸ್ತಿತ್ವಕ್ಕಾಗಿ ಸರ್ಕಾರದ ಮೇಲೆ ಹುಸಿ ಆರೋಪ: ಸಿದ್ದರಾಮಯ್ಯ

ಇದಲ್ಲದೆ ಶಾಲೆಗೆ ಕಂಪೌಂಡ್, ಗೇಟ್ ಇಲ್ಲವಾಗಿದ್ದು, ರಾತ್ರಿ ವೇಳೆ ಶಾಲೆ ಕುಡುಕರ ಸಾಮ್ರಾಜ್ಯವಾಗುತ್ತಿದೆ. ಕುಡಿದ ಅಮಲಿನಲ್ಲಿ ಕಿಡಿಗೇಡಿಗಳು ಶಾಲೆ ಬಳಿ ಇಸ್ಪೀಟ್, ಜೂಜು ಆಡುತ್ತಾರೆ. ಬೀಡಿ, ಸಿಗರೇಟು, ಮದ್ಯದ ಬಾಟಲಿಗಳನ್ನು ಶಾಲೆಯ ಆವರಣದಲ್ಲಿ ಎಸೆದು ಹೋಗುತ್ತಾರೆ. ಶಾಲೆಯ ವಾತಾವರಣ ಹಾಳಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಶಾಲೆಗೆ ಶೌಚಾಲಯ, ಕಾಂಪೌಂಡ್ ಗೊಡೆ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಬೇಕು ಎಂದು ಶಾಲಾ ಮಕ್ಕಳು ಆಗ್ರಹಿಸಿದ್ದಾರೆ.

ಗ್ರಾಮಸ್ಥರು ಶಾಲೆಯ ವಿಚಾರವಾಗಿ ಸಾಕಷ್ಟು ಬಾರಿ ಅರ್ಜಿ ಸಲ್ಲಿಸಿದ್ದರೂ ಯಾವೊಬ್ಬ ಅಧಿಕಾರಿ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಶಾಲೆಯಲ್ಲಿ ಮಕ್ಕಳ ದಾಖಲಾತಿ 260 ಇದ್ದು, ಮಕ್ಕಳಿಗೆ ಏನಾದರೂ ಹೆಚ್ಚುಕಮ್ಮಿ ಆದರೆ, ಅದಕ್ಕೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಸಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X