ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

Date:

Advertisements

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.

ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ಸೋಲಿಸಿ ಹೋರಾಟದ ಎಸ್‌ಯುಸಿ ಐ (ಕಮ್ಯುನಿಸ್ಟ್)  ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ಅವರನ್ನು ಗೆಲ್ಲಿಸುವಂತೆ ಪ್ರಜ್ಞಾವಂತ ಮತದಾರರಲ್ಲಿ ಕಾರ್ಯಕರ್ತರು ಮನವಿ ಮಾಡಿದರು.

ನಮ್ಮ ಬದುಕಿನ ಆಗು-ಹೋಗುಗಳಿಗೆ, ಬೆಲೆ ಏರಿಕೆ, ನಿರುದ್ಯೋಗ, ಬಡತನ, ವೇಶ್ಯಾವಾಟಿಕೆ, ರೈತರ ಆತ್ಮಹತ್ಯೆ ಮುಂತಾದ ಸಮಸ್ಯೆಗಳಿಗೆ ಕಾರಣವಾಗಿರುವ ಈ ರಾಜಕೀಯ ವ್ಯವಸ್ಥೆಯನ್ನು ಸೋಲಿಸಿ. ಜನಪರ ವ್ಯವಸ್ಥೆಯ ಜಾರಿಗಾಗಿ ಹೋರಾಟದ ಅಭ್ಯರ್ಥಿಯನ್ನು ಚುನಾಯಿಸಿವಂತೆ ಜನರಲ್ಲಿ ಮನವಿ ಮಾಡಿದರು.

Advertisements

ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಕೆ. ಸೋಮಶೇಖರ್, ಡಿ.ಉಮಾದೇವಿ, ಚನ್ನಬಸವ ಜಾನೇಕಲ್, ಚಾಂದ್ ಪಾಶಾ, ಶಿಲ್ಪಾ ಬಿ.ಕೆ, ಸುಭಾಷ್ಚಂದ್ರ  ಬಿ.ಕೆ, ಪೀರಸಾಬ್, ಹೇಮಂತ್ ಹಾಗೂ ಮುಂತಾದವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X