ಯಾದಗಿರಿ | ಜೋಡಿ ಕೊಲೆ​ ಕೇಸ್‌ಗೆ ಟ್ವಿಸ್ಟ್; ಪ್ರಕರಣದ ಹಿಂದೆ ವಿವಾಹೇತರ ಸಂಬಂಧದ ನೆರಳು

Date:

Advertisements

ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗುಂಪುಗಳಿಂದ ದಲಿತ ಮುಖಂಡ ಮಾಪಣ್ಣ (52) ಹಾಗೂ ಆತನ ಸಹಚರ ಅಲಿಸಾಬ (55)ರನ್ನು ಹತ್ಯೆ ಮಾಡಲಾಗಿತ್ತು. ಸದ್ಯ ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.16 ರಂದು ಸಾದ್ಯಾಪುರ ಕ್ರಾಸ್ ಬಳಿ ಕಟಿಂಗ್ ಮಾಡಿಸಿಕೊಂಡು ಹೋಗುತ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ ಒಂದು ಬರ್ಬರವಾಗಿ ಕೊಲೆ ಮಾಡಿತ್ತು.

Advertisements

ಇನ್ನು ಬಂಧಿತ ಆರೋಪಿ ಶಿವಪ್ಪಗೌಡ 11 ವರ್ಷಗಳ ಹಿಂದೆ ಅನೈತಿಕ ಸಂಬಂಧದಲ್ಲಿ ದಲಿತ ಮುಖಂಡ ಮಾಪಣ್ಣನ ಕಣ್ಣಿಗೆ ಸಿಕ್ಕಿಬಿದ್ದಿದ್ದ. ಆಗ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಇದೇ ವಿಚಾರಕ್ಕೆ ಮಾಪಣ್ಣ ಮತ್ತು ಶಿವಪ್ಪಗೌಡ ನಡುವೆ ದ್ವೇಷ ಬೆಳೆದಿತ್ತು. ಹಾಗಾಗಿ 2014ರಲ್ಲಿ ಮಾಪಣ್ಣ ಕೊಲೆಗೆ ರೌಡಿಶೀಟರ್ ಹುಸೇನಿಗೆ ಶಿವಪ್ಪಗೌಡ ಸುಪಾರಿ ಕೊಟ್ಟಿದ್ದ.

2014ರಲ್ಲಿ ಭೀಮರಾಯನಗುಡಿ ಬಳಿ ಮಾಪಣ್ಣನ ರೌಡಿಶೀಟರ್ ಹುಸೇನಿ ಗ್ಯಾಂಗ್​ ಗುಂಡಿನ ದಾಳಿ ಮಾಡಿತ್ತು. ಆಗ ಮಾಪಣ್ಣ ಸ್ವಲ್ಪದರಲ್ಲೇ ಬದುಕುಳಿದಿದ್ದ. ಬಳಿಕ 3 ಬಾರಿ ಮಾಪ್ಪಣ್ಣನ ಮೇಲೆ ಸುಪಾರಿ ಗ್ಯಾಂಗ್ ದಾಳಿ ಮಾಡಿತ್ತು. 2019ರಲ್ಲಿ ಮಾಪಣ್ಣ ಗ್ಯಾಂಗ್ ಹುಸೇನಿಯ ಮೇಲೆ ಹಲ್ಲೆ ಮಾಡಿತ್ತು. ಇದರಿಂದಾಗಿ ಮಾಪಣ್ಣ ಹಾಗೂ ಹುಸೇನಿ ನಡುವೆ ದ್ವೇಷ ಬೆಳೆದಿತ್ತು.

ಇದನ್ನೂ ಓದಿ: ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರತೆ ಖಂಡನೀಯ: ದಸಂಸ ಪ್ರತಿಭಟನೆ

ಪ್ರತಿ ಭಾನುವಾರ ಮಾಪಣ್ಣ ಭೀಮರಾಯನಗುಡಿಗೆ ಬರುತ್ತಿದ್ದ. ಬೈಕ್​ನಲ್ಲಿ ಬರುತ್ತಿದ್ದ ಮಾಪಣ್ಣನನ್ನು ಕಾರಿನಲ್ಲಿ ಬೆನ್ನಟ್ಟಿದ್ದ ಗ್ಯಾಂಗ್, ಸಾದ್ಯಾಪುರ ಕ್ರಾಸ್ ಬಳಿ ಬೈಕ್​ಗೆ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X