ಯಾದಗಿರಿ | ಯುವಕರು ಸರ್ಕಾರಿ ನೌಕರಿ ನೆಚ್ಚಿಕೊಳ್ಳದೆ ಸ್ವಯಂ ಉದ್ಯೋಗದಲ್ಲಿ ತೊಡಗಬೇಕು: ಉಮೇಶ ಮುದ್ನಾಳ

Date:

Advertisements

ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಸ್ವಯಂ ಉದ್ಯೋಗ ಮಾಡುವ ಮೂಲಕ ನಾಲ್ಕು ಜನರಿಗೆ ಉದ್ಯೋಗ ಕೊಡುವಂತಹ ಕಾರ್ಯ ಮಾಡುವುದು ಉತ್ತಮ ಕಾರ್ಯ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅಭಿಪ್ರಾಯಪಟ್ಟರು.

ಯಾದಗಿರಿ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸೂಗೂರೇಶ್ವರ ಭೂಜನಾಲಯದ ಎದುರುಗಡೆ ನೂತನವಾಗಿ ಆರಂಭಿಸಲಾಗಿರುವ ʼಟೀ ಟೈಂʼಚಹಾ ಅಂಗಡಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸುಮಾರು 39ಬಗೆಯ ಚಹಾ ಕಾಫೀ, ಜ್ಯೂಸ್, ಮಿಲ್ಕ್ ಶೇಖ್ ಸೇರಿ ಬೆಲ್ಲದ ಚಾ ಒದಗಿಸುವ ಕೇಂದ್ರ ಇದಾಗಿದ್ದು, ಇಂತಹ ಕೇಂದ್ರಗಳನ್ನು ತೆರೆಯುವ ಮೂಲಕ ಯುವಕರು ಸ್ವಾವಲಂಬಿಯಾಗಬಹುದು ಮತ್ತು ಸ್ವಯಂ ಹಾಗೂ ಇನ್ನಿತರರ ನಿರುದ್ಯೋಗ ಸಮಸ್ಯೆಯನ್ನು ಮೆಟ್ಟಿ ನಿಲ್ಲಬಹುದಾಗಿದೆ ಎಂದು ಹೇಳಿದರು.

Advertisements

ಈ ರೀತಿಯ ಸ್ವಯಂ ಉದ್ಯೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಕೊಟ್ಟಲ್ಲಿ ಯುವಕರು ಸ್ವಯಂ ಉದ್ಯೋಗ ಮಾಡಲು ಮುಂದಾಗುತ್ತಾರೆ ಎಂದರು.

ಇಂತಹ ಸ್ವಯಂ ಉದ್ಯೋಗ ಒದಗಿಸುವ ಫ್ರಾಂಚೆಸಿಗಳು ಜನನಿಭಿಡ ಸ್ಥಳದಲ್ಲಿ ಇನ್ನು ಹೆಚ್ಚು ಆರಂಭಿಸಬೇಕು ಇದರಿಂದ ಉದ್ಯೋಗವೂ ಲಭಿಸುತ್ತದೆ. ಸ್ವಯಂ ಉದ್ಯೋಗಕ್ಕೆ ಒತ್ತು ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಫ್ರಾಂಚೆಸಿಯ ನಿರ್ವಾಹಕ ಕಾಂತು ಪುಟಪಾಕ್, ಚಾರಿ ದಂತಾಪುರ, ಶಿವಕುಮಾರ ದಂತಾಪುರ, ದೇವದಾಸ ಕೆ. ಗುರುಮಠಕಲ್, ಮದರಪ್ಪ ಮಡೆಪಲ್ಲಿ, ನಾಗೇಶ, ಗಣೇಶ ಅಜಲಾಪುರ ಸೇರಿ ಅನೇಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X