ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

Date:

Advertisements
  • ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು
  • ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.

ಮಾರ್ಚ್ 24ರಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಅವರಿಗೆ ಬೆಂಬಲ ನೀಡಲು ಗ್ರಾಮದಲ್ಲಿ ಪಂಚರತ್ನ ಯಾತ್ರೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಳಿದ ಆಹಾರ ಸೇವಿಸಿ ಜಾನುವಾರುಗಳು ಮೃತಪಟ್ಟಿವೆ.

ಸ್ಥಳೀಯ ನಿವಾಸಿ ಮಲ್ಲಿಕಾರ್ಜುನ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಊಟವನ್ನು ಕಾರ್ಯಕ್ರಮದ ಬಳಿಕ ಜಮೀನಿನಲ್ಲಿ ಹಾಕಲಾಗಿತ್ತು. ಬೇಸಿಗೆ ವೇಳೆ ಯಾದಗಿರಿ ಭಾಗದಲ್ಲಿ, ಸಾಮಾನ್ಯವಾಗಿ ಜಾನುವಾರುಗಳನ್ನು ತಾವಾಗಿಯೇ ಮೇಯಲು ಬಿಡುತ್ತಾರೆ” ಎಂದು ತಿಳಿಸಿದರು.

Advertisements

“ಮೇಯಲು ಹೋದ ಸುಮಾರು 30-35 ಜಾನುವಾರುಗಳು ಉಳಿಕೆ ಆಹಾರವನ್ನು ರಾತ್ರಿಯಿಡೀ ತಿಂದು ಅಸ್ವಸ್ಥವಾಗಿದ್ದವು. ಅಲ್ಲದೆ ಮಾರ್ಚ್ 25ರಂದು ಯಾವುದೇ ಜಾನುವಾರುಗಳು ಮನೆಗೆ ಮರಳಿರಲಿಲ್ಲ. ಜಾನುವಾರುಗಳ ಹೊಟ್ಟೆ ಉಬ್ಬಿರುವುದನ್ನು ಕಂಡ ಕೆಲವು ಸ್ಥಳೀಯರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು” ಎಂದು ಮಲ್ಲಿಕಾರ್ಜುನ್‌ ತಿಳಿಸಿದರು.

ಘಟನೆ ಕುರಿತು ವಿಷಯ ತಿಳಿದ ಬಳಿಕ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರಾಜು ದೇಶಮುಖ್ ಅವರು ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಪಶುವೈದ್ಯರೊಂದಿಗೆ ಗ್ರಾಮಕ್ಕೆ ಧಾವಿಸಿದರು.

ವೈದ್ಯರು ಜಾನುವಾರುಗಳನ್ನು ಪರೀಕ್ಷಿಸಿ, “ಸುಮಾರು ಒಂಬತ್ತು ಜಾನುವಾರುಗಳು ಈಗಾಗಲೇ ಮೃತಪಟ್ಟಿವೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ನಡೆಸಲಾಗಿದೆ. ಕಳಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿಸಿದೆ” ಎಂದು ತಿಳಿಸಿದ್ದಾರೆ.

“ಕೊಳೆತು ಹೋಗಿದ್ದ ಆಹಾರವನ್ನು ಪ್ರತಿ ಜಾನುವಾರು ಸುಮಾರು 5-6 ಕೆಜಿ ಅನ್ನವನ್ನು ಸೇವಿಸಿರಬಹುದು. ಚಿಕಿತ್ಸೆ ಪಡೆಯುತ್ತಿದ್ದ ಜಾನುವಾರುಗಳಲ್ಲಿ ಭಾನುವಾರ (ಮಾರ್ಚ್‌ 26) ಆರು ಮೃತಪಟ್ಟಿವೆ. ಇನ್ನೂ 20 ಜಾನುವಾರುಗಳು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ” ಎಂದು ಹೇಳಿದ್ದಾರೆ.

ಘಟನೆಯ ನಂತರ, ಆಹಾರವನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೆ ನಿರ್ದೇಶನ ನೀಡಿದ ಬಳಿಕ ಅವರು ಉಳಿದ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X