ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

Date:

  • ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು
  • ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.

ಮಾರ್ಚ್ 24ರಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಅವರಿಗೆ ಬೆಂಬಲ ನೀಡಲು ಗ್ರಾಮದಲ್ಲಿ ಪಂಚರತ್ನ ಯಾತ್ರೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಳಿದ ಆಹಾರ ಸೇವಿಸಿ ಜಾನುವಾರುಗಳು ಮೃತಪಟ್ಟಿವೆ.

ಸ್ಥಳೀಯ ನಿವಾಸಿ ಮಲ್ಲಿಕಾರ್ಜುನ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಊಟವನ್ನು ಕಾರ್ಯಕ್ರಮದ ಬಳಿಕ ಜಮೀನಿನಲ್ಲಿ ಹಾಕಲಾಗಿತ್ತು. ಬೇಸಿಗೆ ವೇಳೆ ಯಾದಗಿರಿ ಭಾಗದಲ್ಲಿ, ಸಾಮಾನ್ಯವಾಗಿ ಜಾನುವಾರುಗಳನ್ನು ತಾವಾಗಿಯೇ ಮೇಯಲು ಬಿಡುತ್ತಾರೆ” ಎಂದು ತಿಳಿಸಿದರು.

“ಮೇಯಲು ಹೋದ ಸುಮಾರು 30-35 ಜಾನುವಾರುಗಳು ಉಳಿಕೆ ಆಹಾರವನ್ನು ರಾತ್ರಿಯಿಡೀ ತಿಂದು ಅಸ್ವಸ್ಥವಾಗಿದ್ದವು. ಅಲ್ಲದೆ ಮಾರ್ಚ್ 25ರಂದು ಯಾವುದೇ ಜಾನುವಾರುಗಳು ಮನೆಗೆ ಮರಳಿರಲಿಲ್ಲ. ಜಾನುವಾರುಗಳ ಹೊಟ್ಟೆ ಉಬ್ಬಿರುವುದನ್ನು ಕಂಡ ಕೆಲವು ಸ್ಥಳೀಯರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು” ಎಂದು ಮಲ್ಲಿಕಾರ್ಜುನ್‌ ತಿಳಿಸಿದರು.

ಘಟನೆ ಕುರಿತು ವಿಷಯ ತಿಳಿದ ಬಳಿಕ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರಾಜು ದೇಶಮುಖ್ ಅವರು ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಪಶುವೈದ್ಯರೊಂದಿಗೆ ಗ್ರಾಮಕ್ಕೆ ಧಾವಿಸಿದರು.

ವೈದ್ಯರು ಜಾನುವಾರುಗಳನ್ನು ಪರೀಕ್ಷಿಸಿ, “ಸುಮಾರು ಒಂಬತ್ತು ಜಾನುವಾರುಗಳು ಈಗಾಗಲೇ ಮೃತಪಟ್ಟಿವೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ನಡೆಸಲಾಗಿದೆ. ಕಳಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿಸಿದೆ” ಎಂದು ತಿಳಿಸಿದ್ದಾರೆ.

“ಕೊಳೆತು ಹೋಗಿದ್ದ ಆಹಾರವನ್ನು ಪ್ರತಿ ಜಾನುವಾರು ಸುಮಾರು 5-6 ಕೆಜಿ ಅನ್ನವನ್ನು ಸೇವಿಸಿರಬಹುದು. ಚಿಕಿತ್ಸೆ ಪಡೆಯುತ್ತಿದ್ದ ಜಾನುವಾರುಗಳಲ್ಲಿ ಭಾನುವಾರ (ಮಾರ್ಚ್‌ 26) ಆರು ಮೃತಪಟ್ಟಿವೆ. ಇನ್ನೂ 20 ಜಾನುವಾರುಗಳು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ” ಎಂದು ಹೇಳಿದ್ದಾರೆ.

ಘಟನೆಯ ನಂತರ, ಆಹಾರವನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೆ ನಿರ್ದೇಶನ ನೀಡಿದ ಬಳಿಕ ಅವರು ಉಳಿದ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಿದ್ಯುತ್ ದರ ಹೆಚ್ಚಳ; ಕೈಗಾರಿಕಾ ಉದ್ಯಮಿಗಳ ಸಂಘ ಖಂಡನೆ

ವಿದ್ಯುತ್ ಶುಲ್ಕ ಗಣನೀಯ ಹೆಚ್ಚಳವನ್ನು ವಿರೋಧಿಸಿ ಧಾರವಾಡ ಬೆಳವಣಿಗೆ ಕೇಂದ್ರ ಮತ್ತು...

ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್‌ ನಿಂದ 'ಚಿಗರಿ' ಹೆಸರಿನ...

ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ...

ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

ಉದ್ಯೋಗ ಮತ್ತು ನೇಮಕಾತಿ ಅಭಿಯಾನ ಉದ್ಘಾಟಿಸಿ ಉನ್ನತ ಶಿಕ್ಷಣ ಸಚಿವ ಹೇಳಿಕೆ 'ಎಸ್‌ಇಪಿ...