ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

Date:

  • ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು
  • ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.

- Advertisement -

ಮಾರ್ಚ್ 24ರಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಅವರಿಗೆ ಬೆಂಬಲ ನೀಡಲು ಗ್ರಾಮದಲ್ಲಿ ಪಂಚರತ್ನ ಯಾತ್ರೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಳಿದ ಆಹಾರ ಸೇವಿಸಿ ಜಾನುವಾರುಗಳು ಮೃತಪಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಸ್ಥಳೀಯ ನಿವಾಸಿ ಮಲ್ಲಿಕಾರ್ಜುನ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಊಟವನ್ನು ಕಾರ್ಯಕ್ರಮದ ಬಳಿಕ ಜಮೀನಿನಲ್ಲಿ ಹಾಕಲಾಗಿತ್ತು. ಬೇಸಿಗೆ ವೇಳೆ ಯಾದಗಿರಿ ಭಾಗದಲ್ಲಿ, ಸಾಮಾನ್ಯವಾಗಿ ಜಾನುವಾರುಗಳನ್ನು ತಾವಾಗಿಯೇ ಮೇಯಲು ಬಿಡುತ್ತಾರೆ” ಎಂದು ತಿಳಿಸಿದರು.

“ಮೇಯಲು ಹೋದ ಸುಮಾರು 30-35 ಜಾನುವಾರುಗಳು ಉಳಿಕೆ ಆಹಾರವನ್ನು ರಾತ್ರಿಯಿಡೀ ತಿಂದು ಅಸ್ವಸ್ಥವಾಗಿದ್ದವು. ಅಲ್ಲದೆ ಮಾರ್ಚ್ 25ರಂದು ಯಾವುದೇ ಜಾನುವಾರುಗಳು ಮನೆಗೆ ಮರಳಿರಲಿಲ್ಲ. ಜಾನುವಾರುಗಳ ಹೊಟ್ಟೆ ಉಬ್ಬಿರುವುದನ್ನು ಕಂಡ ಕೆಲವು ಸ್ಥಳೀಯರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು” ಎಂದು ಮಲ್ಲಿಕಾರ್ಜುನ್‌ ತಿಳಿಸಿದರು.

ಘಟನೆ ಕುರಿತು ವಿಷಯ ತಿಳಿದ ಬಳಿಕ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರಾಜು ದೇಶಮುಖ್ ಅವರು ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಪಶುವೈದ್ಯರೊಂದಿಗೆ ಗ್ರಾಮಕ್ಕೆ ಧಾವಿಸಿದರು.

ವೈದ್ಯರು ಜಾನುವಾರುಗಳನ್ನು ಪರೀಕ್ಷಿಸಿ, “ಸುಮಾರು ಒಂಬತ್ತು ಜಾನುವಾರುಗಳು ಈಗಾಗಲೇ ಮೃತಪಟ್ಟಿವೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ನಡೆಸಲಾಗಿದೆ. ಕಳಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿಸಿದೆ” ಎಂದು ತಿಳಿಸಿದ್ದಾರೆ.

“ಕೊಳೆತು ಹೋಗಿದ್ದ ಆಹಾರವನ್ನು ಪ್ರತಿ ಜಾನುವಾರು ಸುಮಾರು 5-6 ಕೆಜಿ ಅನ್ನವನ್ನು ಸೇವಿಸಿರಬಹುದು. ಚಿಕಿತ್ಸೆ ಪಡೆಯುತ್ತಿದ್ದ ಜಾನುವಾರುಗಳಲ್ಲಿ ಭಾನುವಾರ (ಮಾರ್ಚ್‌ 26) ಆರು ಮೃತಪಟ್ಟಿವೆ. ಇನ್ನೂ 20 ಜಾನುವಾರುಗಳು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ” ಎಂದು ಹೇಳಿದ್ದಾರೆ.

ಘಟನೆಯ ನಂತರ, ಆಹಾರವನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೆ ನಿರ್ದೇಶನ ನೀಡಿದ ಬಳಿಕ ಅವರು ಉಳಿದ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...