ಯಾದಗಿರಿ | ಸಬ್ಸಿಡಿ ಹಣ ಮಂಜೂರಾತಿಗೆ ₹5 ಸಾವಿರ ಲಂಚ : ತೋಟಗಾರಿಕೆ ಇಲಾಖೆ ಎಡಿ ಲೋಕಾಯುಕ್ತ ಬಲೆಗೆ

Date:

Advertisements

ಈರುಳ್ಳಿ ಶೆಡ್‌ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ ಫೋನ್ ಪೇ ಮೂಲಕ ₹5 ಸಾವಿರ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಈರುಳ್ಳಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು. ಅವರಿಗೆ ಸರ್ಕಾರದಿಂದ ₹80 ಸಾವಿರ ಸಬ್ಸಿಡಿ ಹಣ ಮಂಜೂರಾಗಿತ್ತು. ಆ ಹಣ ಮಂಜೂರು ಮಾಡಲು ಸಬ್ಸಿಡಿ ಹಣದಲ್ಲಿ ಸುಮಾರು ₹20 ಸಾವಿರ ನೀಡುವಂತೆ ಶಿವದತ್ತ ಬೇಡಿಕೆ ಇಟ್ಟಿದ್ದರು. ಗುರುವಾರ ರೈತ ಶಂಕರಪ್ಪ ಅವರು ಲಂಚದ ಹಣ ಅಧಿಕಾರಿಗೆ ಫೋನ್ ಪೇ ಮೂಲಕ ಐದು ಸಾವಿರ ಜಮಾ ಮಾಡಿದ್ದಾರೆ.

ರೈತ ಶಂಕರಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ, ಅಧಿಕಾರಿಗಳು ಯಾದಗಿರಿಯ ಅಂಬೇಡ್ಕರ್‌ ನಗರದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.

Advertisements

ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಎಚ್.ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ಸಿದ್ದರಾಯ, ಸಂಗಮೇಶ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದರು.

ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ , ಮಲ್ಲಪ್ಪ, ಖಾಸೀಂ, ಮಲ್ಲಿನಾಥ, ಮಲ್ಲಿಕಾರ್ಜುನ ಮಡಿವಾಳ ಇದ್ದರು.

ಇದನ್ನೂ ಓದಿ : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್‌ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X