ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

Date:

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಡೆಯಬೇಕಾದ ದಲಿತ ಸಭೆಗಳು ಕೇವಲ ಹಾಜರಾತಿ, ಚಹಾ ಹಾಗೂ ಫೋಟೋ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು ಎಂದು ದಸಂಸ ಅಂಬೇಡ್ಕರ್ ಮಾರ್ಗ ಜಿಲ್ಲಾ ಯುವ ಮುಖಂಡ ವಿಶ್ವ ನಾಟೇಕಾರ್ ಆಗ್ರಹಿಸಿದರು.

- Advertisement -

ನಗರದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಅವರು, ‘ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ನಿಯಮಿತವಾಗಿ ದಲಿತ ಸಭೆಗಳನ್ನು ನಡೆಸಿ, ದಲಿತ ಸಮುದಾಯದ ಜನರನ್ನು ವ್ಯಾಪಕವಾಗಿ ಆಹ್ವಾನಿಸಿ ಅವರ ನೈಜ ಸಮಸ್ಯೆಗಳನ್ನು ಆಲಿಸಬೇಕು. ಸಭೆಯಲ್ಲಿ ಪ್ರಸ್ತಾಪವಾಗುವ ಪ್ರತಿಯೊಂದು ಸಮಸ್ಯೆಯನ್ನು ದಾಖಲಿಸಿ, ಸಂಬಂಧಪಟ್ಟ ಇಲಾಖೆಗೆ ಕಳುಹಿಸುವುದರ ಜೊತೆಗೆ, ಸಮಸ್ಯೆ ಪರಿಹಾರವಾಗುವವರೆಗೆ ಅಧಿಕಾರಿಗಳು ನಿರಂತರವಾಗಿ ಹಿಂಬಾಲಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

‘ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುವ ಕೆಲವು ದಲಿತ ಸಭೆಗಳಲ್ಲಿ ಕೆಲವೇ ಮುಖಂಡರನ್ನು ಆಹ್ವಾನಿಸಿ, ಹಾಜರಾತಿ ಪಡೆದು, ಚಹಾ ಕುಡಿದು ಫೋಟೋ ತೆಗೆಸಿಕೊಳ್ಳುವ ಕಾರ್ಯಕ್ರಮಗಳಾಗುತ್ತಿವೆ ಎಂಬ ಆರೋಪಗಳಿವೆ. ಇಂತಹ ಸಭೆಗಳಿಂದ ದಲಿತ ಸಮುದಾಯದ ನೈಜ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಸಭೆಯ ಉದ್ದೇಶವೇ ವಿಫಲವಾಗುತ್ತದೆ’ ಎಂದು ಅವರು ಟೀಕಿಸಿದರು.

‘ಪ್ರತಿ ತಿಂಗಳ ಎರಡನೇ ಭಾನುವಾರದಂದು ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ದಲಿತ ಸಭೆಗಳನ್ನು ನಡೆಸಬೇಕು. ಸಭೆಯ ನಡವಳಿ, ಚರ್ಚೆಯಾದ ಸಮಸ್ಯೆಗಳು, ಕೈಗೊಂಡ ನಿರ್ಣಯಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳ ವಿವರಗಳನ್ನು ದಾಖಲಿಸಿ, ಮುಂದಿನ ಸಭೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಗ್ರಾಮೀಣ ಪ್ರದೇಶದ ದಲಿತ ಕುಟುಂಬಗಳಿಗೂ ಸಭೆಯ ಮಾಹಿತಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

Advertisements

‘ದೌರ್ಜನ್ಯ ಪ್ರಕರಣಗಳಲ್ಲಿ ‘ಕೌಂಟರ್ ಕೇಸ್’ ದಾಖಲಿಸುವ ಮೂಲಕ ಮೂಲ ಪ್ರಕರಣವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳಿವೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಎರಡೂ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು’ ಎಂದು ವಿಶ್ವ ನಾಟೇಕಾರ್ ಆಗ್ರಹಿಸಿದರು.

‘ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಕಾನೂನು ನೆರವು, ರಕ್ಷಣೆ ಹಾಗೂ ಸರ್ಕಾರದ ನಿಯಮಾನುಸಾರ ದೊರೆಯಬೇಕಾದ ಪರಿಹಾರಧನವನ್ನು ವಿಳಂಬವಿಲ್ಲದೆ ಒದಗಿಸಬೇಕು. ಪರಿಹಾರಕ್ಕಾಗಿ ಸಂತ್ರಸ್ತರು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರಿ ವಹಿಸಬೇಕು’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಮಿತಿ ಸದಸ್ಯರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ದಲಿತ ಸಭೆಗಳು ಹಾಗೂ ದೌರ್ಜನ್ಯ ತಡೆ ಸಮಿತಿಗಳು ಕೇವಲ ಕಾಗದದ ಮೇಲಿನ ವ್ಯವಸ್ಥೆಯಾಗದೆ, ದಲಿತರ ಹಕ್ಕುಗಳು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿ ವೇದಿಕೆಗಳಾಗಬೇಕು’ ಎಂದು ಅವರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...