ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

Date:

Advertisements

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ 5 ಲಕ್ಷ ಪರಿಹಾರ ನೀಡಬೇಕೆಂದು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿಯು ನಗರದಲ್ಲಿ ಜೋರಾಗಿ ಸುರಿದ ಮಳೆಯ ನಡುವೆಯೂ ಸಹ ಧರಣಿ ಮುಂದುವರೆದಿದೆ.

‘ರಾತ್ರಿಯೂ ಸಹ ಧರಣಾ ಸ್ಥಳದಲ್ಲೇ ಮಲಗಿದ್ದ ಆಶಾ ಕಾರ್ಯಕರ್ತೆಯರು ಮಧ್ಯಾಹ್ನ ಸುರಿದ ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಚಿಕ್ಕ ಚಿಕ್ಕ ಮಕ್ಕಳನ್ನು ಕೊಂಕಳಲ್ಲಿ ಎತ್ತಿಕೊಂಡು ಮಳೆಯಲ್ಲೇ ನಿಂತಿದ್ದರು. ಇಡೀ ಪ್ರತಿಭಟನಾ ಸ್ಥಳದಲ್ಲಿ ಮಳೆ ನೀರು ಹರಿದಾಡಿದವು. ಸುಮಾರು ಒಂದು ಗಂಟೆಗೂ ಅಧಿಕ ಸುರಿದ ಮಳೆಯಲ್ಲೇ ಹೋರಾಟ ಮುಂದುವರೆಸಿದರು.
ತಾವೇ ಸಿದ್ಧಪಡಿಸಿದ್ದ ಅಡುಗೆಯನ್ನು ಮಳೆಯಲ್ಲಿಯೇ ನಿಂತು ಊಟ ಮಾಡುತ್ತಿರುವುದು ಕಂಡುಬಂತು.

Advertisements
WhatsApp Image 2025 08 14 at 11.49.57 AM

‘ಮಳೆ ಸ್ವಲ್ಪ ಕಡಿಮೆ ಆದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳ ಮನವಿ ಸ್ವೀಕರಿಸಿ, ಮುಖ್ಯಮಂತ್ರಿಗಳಿಗೆ ಮನವಿ ರವಾನಿಸುಲಾಗುವುದೆಂದು’ ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಎರಡನೇ ದಿನದ ಧರಣಿಯಲ್ಲಿ ಡಿ ಉಮಾದೇವಿ, ರಾಮಲಿಂಗಪ ಬಿ.ಎನ್, ಮಹಾದೇವಿ, ಶ್ರೀದೇವಿ, ಇಂದ್ರಮ್ಮ, ರಸೀದಾ, ಲಲಿತಾ, ರಾಚಮ್ಮ, ಸತ್ಯಾದೇವಿ, ಸೂಗಮ್ಮ, ಕಾಮಾಕ್ಷಿ, ಸರೋಜಾ, ಮಲ್ಲಮ್ಮ, ಅನಿತಾ, ಪದ್ಮಾ, ಜಯಶ್ರೀ, ಕೃಪಾ, ಶರಬಮ್ಮ, ಸುನೀತಾ, ಬೇಬಿ, ರೇಣುಕಾ, ಪುಷ್ಪಲಾತ ಸೇರಿದಂತೆ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X