ಯಾದಗಿರಿ | 5 ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಗಾರ

Date:

Advertisements

ಹೆಣ್ಣು ಮಕ್ಕಳು ನಾಲ್ಕು ಕೋಣೆಯೊಳಗೆ ಇರುವುದಲ್ಲ. ಅವರ ಜೀವನೋಪಾಯಕ್ಕಾಗಿ ಕೌಶಲ್ಯಗಳ ತರಬೇತಿಗಳನ್ನು ಪಡೆದುಕೊಳ್ಳುವುದು ತುಂಬಾ ಅವಶ್ಯಕ ಎಂದು ಮಲ್ಲಣ್ಣ ಹೇಳಿದರು.

ಯಾದಗಿರಿ ಜಿಲ್ಲೆ ಶಹಾಪುರದ ವೈಷ್ಣವಿ ಹೋಟೆಲ್‌ ಸಭಾಂಗಣದಲ್ಲಿ ಇಎಸ್‌ಎಎಫ್‌ ಫೌಂಡೇಶನ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬ್ಯೂಟಿಷಿಯನ್ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಭೀಮನಗೌಡ ಬಿರಾದರ್ ಅಸಿಸ್ಟೆಂಟ್ ಡೈರೆಕ್ಟರ್ ತಾಲೂಕ ಪಂಚಾಯ, ಮಲ್ಲಣ್ಣ ದೇಸಾಯಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಶಹಾಪುರ, ಅನಿಲ್ ತೇಜಪ್ಪ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವ್ಯವಸ್ಥಾಪಕರು ಕಾರ್ಯಕ್ರಮವನ್ನು ಸಸಿಗೆ ನೀರು ಉಣ್ಣಿಸುವ ಮುಖಾಂತರ ಉದ್ಘಾಟಿಸಿದರು.

Advertisements

“ಕುಟುಂಬದಲ್ಲಿ ಅವರು ತಮ್ಮಲ್ಲಿರುವ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು. ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ನೀಡಿರುವ ಒಂದು ಅವಕಾಶವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಜತೆಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನೂ ಕೂಡ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಅನಿಲ್ ತೇಜಪ್ಪ ಮಾತನಾಡಿ, “ಈ ತರಬೇತಿ ಕಾರ್ಯಗಾರದಲ್ಲಿ ತಪ್ಪದೇ ಎಲ್ಲರೂ ಬಂದು ತರಬೇತಿ ತೆಗೆದುಕೊಳ್ಳಬೇಕು. ತಮ್ಮ ಕೌಶಲ್ಯವನ್ನು ಅಭಿವೃದ್ಧಿಗೊಳಿಸಿಕೊಳ್ಳುವಲ್ಲಿ ತುಂಬಾ ಉಪಯೋಗವಾಗಲಿದ್ದು, ಈ ತರಬೇತಿಯು ಐದು ದಿನಗಳವರೆಗೆ ಇರುತ್ತದೆ. ಮುಗಿದ ನಂತರ ಪ್ರಮಾಣ ಪತ್ರಗಳನ್ನು ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ

ಈ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಕಿಶೋರಿಯರು ಸೇರಿದಂತೆ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ ವರ್ಗದವರು ಇದ್ದರು.

ವರದಿ: ಮೋಹನ ಹೊಸಮನಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X