ಯಾದಗಿರಿ | ಒಳಮೀಸಲಾತಿ ಸಮೀಕ್ಷೆ ನಮೂನೆಯಲ್ಲಿ ಧರ್ಮದ ಕಾಲಂ ಕೈಬಿಟ್ಟ ಆಯೋಗ : ದೇವೇಂದ್ರ ಹೆಗಡೆ

Date:

Advertisements

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು ಕೈಬಿಡುವ ಮೂಲಕ ಸಮೀಕ್ಷೆಯ ಆರಂಭದಲ್ಲಿ ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿದೆ ಎಂದು ಬೌದ್ಧ ದಾಖಲಾತಿ ಆಂದೋಲನ ಕರ್ನಾಟಕ ಘಟಕವು ಆರೋಪಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೌದ್ಧ ದಾಖಲಾತಿ ಆಂದೋಲನದ ರಾಜ್ಯ ಪ್ರತಿನಿಧಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ, ‘ಈ ಸಂಬಂಧ ಬೌದ್ಧ ಸಮುದಾಯ ಸಂಘಟನೆಗಳು ನ್ಯಾಯಮೂರ್ತಿ ನಾಗಮೋಹನದಾಸ್ ಅವರನ್ನು ಭೇಟಿ ಮಾಡಿ ಧರ್ಮದ ಕಾಲಂ ಅನ್ನು ಸಮೀಕ್ಷೆಯಲ್ಲಿ ನಮೂದಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಆಯೋಗವು ಮನವಿಯನ್ನು ಪರಿಗಣಿಸಲ್ಲ. ಕ್ರೈಸ್ತ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರವಾದ ಪರಿಶಿಷ್ಟ ಜಾತಿಯ ಅಸ್ಪೃಶ್ಯ ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಧರ್ಮದ ಕಾಲಂ ಅನ್ನೇ ಕೈಬಿಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ದೇಶದಲ್ಲಿ ಈವರೆಗೆ ನಡೆದ ಎಲ್ಲ ಜಾತಿ ಜನಗಣತಿಯಲ್ಲೂ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಿ ಸಮೀಕ್ಷೆ ನಡೆಸಲಾಗಿದೆ. ಆದರೆ ಒಳಮೀಸಲಾತಿಯ ಸಮೀಕ್ಷೆಯ ಸಂದರ್ಭದಲ್ಲಿ ಧರ್ಮದ ಕಲಂ ಅನ್ನು ಕೈಬಿಟ್ಟಿರುವುದು ಸಂವಿಧಾನದ ಕಾಯ್ದೆ (ಪ್ರೆಸಿಡೆನ್ಸಿಯಲ್ ಆರ್ಡರ್) 1950,1956 ಹಾಗೂ 1990 ಸ್ಪಷ್ಟ ಉಲ್ಲಂಘನೆ’ ಎಂದು ಹೇಳಿದ್ದಾರೆ

Advertisements

‘ಬೌದ್ಧ ಧರ್ಮ ಸ್ವೀಕರಿಸಿದ ಪರಿಶಿಷ್ಟ ಜಾತಿಯ ಜನರನ್ನು ಬಲವಂತವಾಗಿ ಹಿಂದೂಗಳು ಎಂದು ಲೆಕ್ಕ ತೋರಿಸುವ ಸಂಘ ಪರಿವಾರದ ಯೋಜನೆಯೂ ಇದಾಗಿದೆ‌. ಡಾ. ಅಂಬೇಡ್ಕರ್ ಅವರ ಧಾರ್ಮಿಕ ಚಳವಳಿಯನ್ನು ಮಟ್ಟಹಾಕಲು ಮಾಡಿದ ಸಂಚು. ಇಂತಹ ಸಾಂವಿಧಾನಿಕ ವಂಚನೆಯನ್ನು ನಿಜವಾದ ಅಂಬೇಡ್ಕರ್ ಅನುಯಾಯಿಗಳು ಸಹಿಸಲು ಸಾಧ್ಯವಿಲ್ಲ. ಇದು ಖಂಡನೀಯ. ಹಾಗಾಗಿ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಬೌದ್ಧ ಸಮುದಾಯದ ಮನವಿಗಳನ್ನು ಪರಿಗಣಿಸದ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಧರ್ಮದ ದಾಖಲೆಯ ಬಗ್ಗೆ ಅಸಡ್ಡೆ ತೋರಿರುವುದು ಅವರ ಪಕ್ಷಪಾತ ಧೋರಣೆ ಎತ್ತಿ ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಸಂವಿಧಾನ ವಿರೋಧಿ ನ್ಯಾಯಮೂರ್ತಿಗಳಿಂದ ಯಾವ ರೀತಿಯ ನ್ಯಾಯ ಸಿಗಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X