ಯಾದಗಿರಿ | ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಉಚಿತ ಬೇಸಿಗೆ ಶಿಬಿರ

Date:

Advertisements

‘ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್’ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ ‘ಉಚಿತ ಬೇಸಿಗೆ ಶಿಬಿರ’ ಆರಂಭವಾಗಿದೆ.

ಯಾದಗಿರಿ ಜಿಲ್ಲೆಯ ನಗರದ ಬಸ್ ನಿಲ್ದಾಣದ ಹತ್ತಿರದ ಸ್ವಾಮಿ ಪರಾಂಕುಶ ಮಠದ ಆವರಣದಲ್ಲಿ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಸುರಪುರ ಮತ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಈ ಸಂಸ್ಥೆಯವರು ಶಿಸ್ತು, ಪ್ರಾಮಾಣಿಕತೆಗೆ ಹೆಸರಾಗಿದ್ದು, ಉತ್ತಮವಾದ ಬೋಧಕ ಸಿಬ್ಬಂದಿಯನ್ನು ಈ ಟ್ರಸ್ಟ್‌ನಲ್ಲಿ ನೇಮಕ ಮಾಡಿಕೊಂಡಿದೆ. ಹಾಗಾಗಿ ಸುರಪುರದ ಮಕ್ಕಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

Advertisements

ಟ್ರಸ್ಟ್‌ನ ಅಧ್ಯಕ್ಷ ಆರ್ ಸಿ ನಾಯಕ ಮಾತನಾಡಿ, “ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ತರಬೇತಿ ಶಿಬಿರ ಪ್ರಾರಂಭಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಈ ಟ್ರಸ್ಟ್‌ನ ಬೋಧಕ ಸಿಬ್ಬಂದಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ತರಬೇತಿ ನಡೆಸುವರು. ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವುದು ಈ ಟ್ರಸ್ಟ್‌ನ ಮುಖ್ಯ ಉದ್ದೇಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಬೆಳ್ಳಂಬೆಳಗ್ಗೆಯೇ ಐವರ ದುರ್ಮರಣ

ಬಳಿಕ ರಾಜಾ ಮುಕುಂದ ನಾಯಕ ಸುರಪುರ ಕ್ರಿಯೇಶನ್ ಕ್ಲಬ್ ಅಧ್ಯಕ್ಷ ಮಾತನಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವ ಅಧ್ಯಕ್ಷ ರಾಜಾ ಸುಭಾಶ್ಚಂದ್ರ ನಾಯಕ, ರಾಜಕೀಯ ಮುಖಂಡ ರಾಜಾ ಸುಶಾಂಕ ನಾಯಕ, ಮಲ್ಲಣ್ಣ ಸಾಹುಕಾರ, ಹುಲಗಪ್ಪ ಪೂಜಾರಿ, ಚವ್ಹಾಲಕ್ಷ್ಮೀ, ಗ್ರಾ.ಪಂ ಅಧ್ಯಕ್ಷ ತಿಮ್ಮಣ್ಣ ದೇವಿಕೇರಾ, ರಾಜಾ ದೇವರಾಜ ನಾಯಕ, ರಾಜಾ ಉಡಚಪ್ಪ ನಾಯಕ ಹಾಗೂ ಬೋಧಕ ಸಿಬ್ಬಂದಿ ವರ್ಗದವರಾದ ಸಾಯಬಣ್ಣ, ಸಹನಾ, ಭಾಗ್ಯಶ್ರೀ, ಸೌಮ್ಯ, ಆದರ್ಶ ಹಾಗೂ ಟ್ರಸ್ಟಿನ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X