ಯಾದಗಿರಿ |‌ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಸರ್ಕಾರ ತಾರತಮ್ಯ: ಇಲಿಯಾಸ್ ಪಟೇಲ್ ಬಳಗಾನೂರ

Date:

Advertisements

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್ ಪಟೇಲ್ ಬಳಗಾನೂರ ಹೇಳಿದರು.

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ರಾಜ್ಯದಲ್ಲಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಿದ್ದು, ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡಲು ಸಿದ್ದರಾಮಯ್ಯನವರ ಸರ್ಕಾರ ಹೊರಡಿಸಿರುವ ಆದೇಶ ತಾರತಮ್ಯ ಹಾಗೂ ಅವೈಜ್ಞಾನಿಕಗಿದೆ. ಸರ್ಕಾರ ಸಮಸ್ತ ಪತ್ರಕರ್ತರ ಕಿವಿಗೆ ಹೂವು ಮುಡಿಸುವ ಕಾರ್ಯದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಎದ್ದುಕಾಣುತ್ತಿದೆ. ಈ ಕರಾಳ ಆದೇಶಕ್ಕೆ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡೂವರೆ ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ವಾರ್ಷಿಕ 1800 ಕೋಟಿ ರೂಗಳನ್ನು ವ್ಯಯ ಮಾಡಿ ರಾಜ್ಯಾಧ್ಯಂತ ಓಡಾಡಲು ಉಚಿತ ಬಸ್ ಪಾಸ್ ಅದೂ ಆಧಾರಕಾರ್ಡ್ ಎಂಬ ಮಾನದಂಡ ಹೊಂದಿದ್ದರೆ ಸಾಕೆಂಬ ನಿಯಮ ವಿಧಿಸಿರುವ ಸಾಮಾಜಿಕ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇವಲ 16 ಕೋಟಿ ರೂಗಳ ವೆಚ್ಚದಲ್ಲಿ ಜಾರಿಮಾಡುತ್ತಿರುವ ಗ್ರಾಮಾಂತರ ಪತ್ರಕರ್ತರಿಗೆ ಇಷ್ಟೆಲ್ಲಾ ಮಾನದಂಡಗಳು ಬೇಕಿತ್ತಾ, 7 ಕೋಟಿ ಜನರ ನಾಡಿಮಿಡಿತ ಅರಿತಿರುವ ತಾವು 15 ಬಡ್ಜೆಟ್ ಮಂಡಿಸಿರುವ ತಮಗೆ ಕೇವಲ 12,000 ಮಂದಿ ಗ್ರಾಮಾಂತರ ಪತ್ರಕರ್ತರ ಕಷ್ಟ ಸುಖ ನೋವನ್ನು ಅರಿಯುವುದರಲ್ಲಿ ವಿಫಲರಾಗಿದ್ದೀರಾ. ರಾಜ್ಯದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜ ತಿದ್ದುವ ಹಾಗೂ ಸಾರ್ವಜನಿಕರು ಸರ್ಕಾರದ ಮಧ್ಯ ಕೊಂಡಿಯಾಗಿ ಕಾರ್ಯನಿರ್ವಹಿಸುವ ಹನ್ನೆರೆಡು ಸಾವಿರ ಮಂದಿ ಪತ್ರಕರ್ತರಿಗೆ ಯಾವುದೇ ಯೋಜನೆಗಳಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X