ಯಾದಗಿರಿ |‌ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಸರ್ಕಾರ ತಾರತಮ್ಯ: ಇಲಿಯಾಸ್ ಪಟೇಲ್ ಬಳಗಾನೂರ

Date:

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್ ಪಟೇಲ್ ಬಳಗಾನೂರ ಹೇಳಿದರು.

- Advertisement -

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ರಾಜ್ಯದಲ್ಲಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಿದ್ದು, ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡಲು ಸಿದ್ದರಾಮಯ್ಯನವರ ಸರ್ಕಾರ ಹೊರಡಿಸಿರುವ ಆದೇಶ ತಾರತಮ್ಯ ಹಾಗೂ ಅವೈಜ್ಞಾನಿಕಗಿದೆ. ಸರ್ಕಾರ ಸಮಸ್ತ ಪತ್ರಕರ್ತರ ಕಿವಿಗೆ ಹೂವು ಮುಡಿಸುವ ಕಾರ್ಯದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಎದ್ದುಕಾಣುತ್ತಿದೆ. ಈ ಕರಾಳ ಆದೇಶಕ್ಕೆ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಎರಡೂವರೆ ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ವಾರ್ಷಿಕ 1800 ಕೋಟಿ ರೂಗಳನ್ನು ವ್ಯಯ ಮಾಡಿ ರಾಜ್ಯಾಧ್ಯಂತ ಓಡಾಡಲು ಉಚಿತ ಬಸ್ ಪಾಸ್ ಅದೂ ಆಧಾರಕಾರ್ಡ್ ಎಂಬ ಮಾನದಂಡ ಹೊಂದಿದ್ದರೆ ಸಾಕೆಂಬ ನಿಯಮ ವಿಧಿಸಿರುವ ಸಾಮಾಜಿಕ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇವಲ 16 ಕೋಟಿ ರೂಗಳ ವೆಚ್ಚದಲ್ಲಿ ಜಾರಿಮಾಡುತ್ತಿರುವ ಗ್ರಾಮಾಂತರ ಪತ್ರಕರ್ತರಿಗೆ ಇಷ್ಟೆಲ್ಲಾ ಮಾನದಂಡಗಳು ಬೇಕಿತ್ತಾ, 7 ಕೋಟಿ ಜನರ ನಾಡಿಮಿಡಿತ ಅರಿತಿರುವ ತಾವು 15 ಬಡ್ಜೆಟ್ ಮಂಡಿಸಿರುವ ತಮಗೆ ಕೇವಲ 12,000 ಮಂದಿ ಗ್ರಾಮಾಂತರ ಪತ್ರಕರ್ತರ ಕಷ್ಟ ಸುಖ ನೋವನ್ನು ಅರಿಯುವುದರಲ್ಲಿ ವಿಫಲರಾಗಿದ್ದೀರಾ. ರಾಜ್ಯದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜ ತಿದ್ದುವ ಹಾಗೂ ಸಾರ್ವಜನಿಕರು ಸರ್ಕಾರದ ಮಧ್ಯ ಕೊಂಡಿಯಾಗಿ ಕಾರ್ಯನಿರ್ವಹಿಸುವ ಹನ್ನೆರೆಡು ಸಾವಿರ ಮಂದಿ ಪತ್ರಕರ್ತರಿಗೆ ಯಾವುದೇ ಯೋಜನೆಗಳಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...