ಯಾದಗಿರಿ | ವೈದ್ಯರ ವರ್ಗಾವಣೆ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರಾದಸಂಸ ಮನವಿ

Date:

Advertisements

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏಕಾಏಕಿ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ತಾಲೂಕ ಶಾಖೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಆರ್), ತಾಲೂಕಾ ಸಮಿತಿ ಶಹಾಪುರ ವತಿಯಿಂದ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಆಡಳಿತಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ‌ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಕರಾದಸಂಸ ಜಿಲ್ಲಾ ಸಂಚಾಲಕ ಶಿವಪುತ್ರ ಜವಾಳಿ ಮಾತನಾಡಿ, ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮ ತಾಲೂಕಿನಲ್ಲಿಯೇ ಅತಿ ದೊಡ್ಡ ಪಂಚಾಯತಿಯಾಗಿದ್ದು, ಸದರಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 50 ಹಾಸಿಗೆಯುಳ್ಳ ದೊಡ್ಡ ಆಸ್ಪತ್ರೆ ಇದಾಗಿದ್ದು, ಇಲ್ಲಿ ಈಗಾಗಲೇ ಸಿಬ್ಬಂದಿಯ ಕೊರತೆ ಇದ್ದು, ಈಗ ಪ್ರಸ್ತುತ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವುದು ನಮ್ಮ ಸಂಘಟನೆಯ ಗಮನಕ್ಕೆ ಬಂದಿದೆ. ಹಾಗಾಗಿ ಈಗಾಗಲೇ ಸಿಬ್ಬಂದಿಯ ಕೊರತೆಯಿಂದ ಬಳಲುತ್ತಿರುವ ಆಸ್ಪತ್ರೆಯಲ್ಲಿ ಮತ್ತೇ ಇರುವ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿದರೆ ನಮ್ಮ ಗ್ರಾಮದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತದೆ” ಎಂದು ತಿಳಿಸಿದರು.

“ಗ್ರಾಮದಲ್ಲಿ ಸುಸಜ್ಜಿತ ಆಸ್ಪತ್ರೆಯಲ್ಲಿ ಈಗಾಗಲೇ ದೋರನಹಳ್ಳಿ ಅಲ್ಲದೇ ಸುತ್ತಮುತ್ತಲಿನ ಗ್ರಾಮದ ಬಡವರು, ನಿರ್ಗತಿಕರು ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ಸಿಬ್ಬಂದಿಯನ್ನೇ ಈಗ ಏಕಾಏಕಿ ವರ್ಗಾವಣೆ ಮಾಡಿದರೆ ಇಡೀ ಗ್ರಾಮದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

Advertisements

“ಯಾದಗಿರಿ ಜಿಲ್ಲೆಯಲ್ಲಿ ಏಕೈಕ ಶಸ್ತ್ರಚಿಕಿತ್ಸೆ ಸಮುದಾಯ ಆರೋಗ್ಯ ಕೇಂದ್ರ ಇದಾಗಿದ್ದು ಕಾರಣ ಇಲ್ಲಿನ ಯಾವುದೇ ವೈದ್ಯ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡಿದ್ದೇ ಆದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯಿಂದ ರಾಜ್ಯ ಹೆದ್ದಾರೆ ಬಂದ್ ಮಾಡಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದೆಂದು” ಎಚ್ಚರಿಕೆ ನೀಡುವುದರ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮರೆಪ್ಪ ಕ್ರಾಂತಿ, ತಾಲೂಕು ಸಂಚಾಲಕ ಶರಬಣ್ಣ ಎಂ ದೋರನಹಳ್ಳಿ, ನಾಗರಾಜ್ ಡಿ ಕೆ, ಜೈ ಭೀಮ್ ಸಿಂಗನಹಳ್ಳಿ, ಪರಶು ಸಿಂಗನಹಳ್ಳಿ , ಭೀಮಶಂಕರ್ ಗುಂಡಳ್ಳಿ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X