ಯಾದಗಿರಿ | ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೈತಿಕ ಮೌಲ್ಯಗಳು ಬಹಳ ಮುಖ್ಯ: ಪ್ರಕಾಶ ಸಂಗಮ

Date:

Advertisements

ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ನೈತಿಕ ಮೌಲ್ಯಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ ಎಂದು ವರ್ಲ್ಡ್ ವಿಷನ್ ಚೆನ್ನೈ ಆಫೀಸ್ನ ಸಪ್ಲೈ ಚೈನ್ ವ್ಯವಸ್ಥಾಪಕ ಪ್ರಕಾಶ ಸಂಗಮ ಜಿಲ್ಲೆಯ ಶಾಹಪುರ್ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ ಮಕ್ಕಳಿಗಾಗಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಮೇ.20 ರಿಂದ ಮೇ.22ರವರೆಗೆ 3ದಿನಗಳ ‘ಜೀವನಶಾಲೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ನೈತಿಕ ಮೌಲ್ಯಗಳ ಬಗ್ಗೆ, ಸಾಮಾಜಿಕ ಅರಿವು ಮತ್ತು ಸ್ವಚ್ಛತೆ, ಪರಿಸರ ಸಂರಕ್ಷಣೆ ಕುರಿತು ಪಾಠ ಮತ್ತು ಹಾಡುಗಳ ಮೂಲಕ ಅರಿವು ಮೂಡಿಸಿದರು. ಕಾರ್ಯಕ್ರಮದ ಕೊನೆಯ ದಿನ ಪ್ರಕಾಶ್ ಸಂಗಮ್ ಅವರು, ಅಂಗನವಾಡಿ ಶಾಲೆಯ 67 ಮಕ್ಕಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಿದರು.

ವಲ್ಡ್ ಮೀಷನ್ ಇಂಡಿಯಾ ಸಂಸ್ಥೆಯ ಸುಂದರ ಮಾತನಾಡಿ, “ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಂಸ್ಥೆಯಿಂದ ಕೊಡುವ ಸವಲತ್ತುಗಳನ್ನು ಮಕ್ಕಳು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು ಎಂದರು. ಈ ವೇಳೆ ಮಕ್ಕಳು ಹಾಡು ಹಾಗೂ ನೃತ್ಯದ ಮೂಲಕ ಪ್ರದರ್ಶನ ನೀಡಿದರು.

Advertisements

ಇದನ್ನು ಓದಿದ್ದೀರಾ? ಗದಗ | ಕಪ್ಪತಗುಡ್ಡದಲ್ಲಿ ಬೀಜದ ಉಂಡೆ ಎಸೆಯುವ ಜಾಗೃತಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ನಾಗರಾಜ, ಎಸ್‌ಡಿಎಂಸಿ ಅಧ್ಯಕ್ಷ ಶಿವಣ್ಣ ದೊರೆ, ವರ್ಲ್ಡ್ ವಿಷನ್ ಸಂಸ್ಥೆಯ ಮಿಖಾಯಿಲ್, ರಾಬರ್ಟ್. ಸ್ವಯಂ ಸೇವಕರಾದ ಮೋಹನ್ ಕುಮಾರ್, ಶಿವಣ್ಣ, ಅಶೋಕ್, ಮೇನಕ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X