ಯಾದಗಿರಿ | ಉದ್ಯೋಗ ಖಾತ್ರಿ ಕೆಲಸ; ಗ್ರಾಮ ಪಂಚಾಯ್ತಿ ಮುಂದೆ ಕೃಷಿ ಕೂಲಿಕಾರರ ಸಂಘದಿಂದ ಧರಣಿ

Date:

Advertisements

ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಗ್ರಾಮ ಪಂಚಾಯ್ತಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಹೋತಪೇಟ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮದ ಜನರ ಕೈಗೆ ಸಿಗುತ್ತಿಲ್ಲ. ಫಾರಂ ನಂಬರ್ 6ರ ಸ್ವೀಕೃತಿ ಪತ್ರವನ್ನು ಕೂಡ ಕೂಲಿಕಾರರಿಗೆ ಕೊಡುತ್ತಿಲ್ಲ. ಕಾಲಹರಣ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಕಾಣೆಯಾಗಿದ್ದಾರೆ. ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಹಾಗಾಗಿ, ಪಿಡಿಓ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪಿಡಿಓ ಪ್ರತಿ ದಿನ ಪಂಚಾಯ್ತಿಯಲ್ಲಿ ಇರುವಂತೆ ಮಾಡಬೇಕು, ಈ ಹಿಂದೆ ದುಡಿದವರ 12 ಜನರ ಕೂಲಿ ಹಣ ಕೊಡಬೇಕು, ಉದ್ಯೋಗ ಖಾತ್ರಿ ಕಾಮಗಾರಿಗಳ ಕ್ರಿಯಾ ಯೋಜನೆ ಮಾಡುವಾಗ ಕೂಲಿಕಾರರನ್ನು ಸೇರಿಸಿ ಯೋಜನೆ ಮಾಡಬೇಕು, ಎಲ್ಲರಿಗೂ ಜಾಬ್ ಕಾರ್ಡ್‌ ಕೊಡಬೇಕು, ಆರೋಗ್ಯ ಕಾರ್ಡ್ ವಿತರಣೆ ಮಾಡಬೇಕು, ಸಮಯಕ್ಕೆ ಸರಿಯಾಗಿ NMMS ಮಾಡಬೇಕು, ಮೇಟಿಗಳ ನೋಂದಣಿ ಮಾಡಬೇಕು, ಮೇಟಿಗಳಿಗೆ ಗೌರವ ಧನ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನಿಟ್ಟು ಹೋತಪೇಟ ಗ್ರಾಮ ಪಂಚಾಯ್ತಿ ಮುಂದೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಮುಖಂಡರು ಧರಣಿ ಸತ್ಯಾಗ್ರಹ ನಡೆಸಿದರು.

Advertisements

ಕೂಲಿಕಾರರ ಸಂಘ

ಈ ಪ್ರತಿಭಟನೆಯ ವೇಳೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷರಾದ ದವಳಸಾಬ್ ನದಾಫ್, ಶಹಾಪುರ ತಾಲೂಕು ಘಟಕದ ಮುಖಂಡರಾದ ಗೀತಾ ಹೋತಪೇಟ, ರಂಗಮ್ಮ ಕಟ್ಟಿಮನಿ, ಭೀಮರಾಯ ಪೂಜಾರಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಹೋತಪೇಟ ಗ್ರಾಮ ಘಟಕದ ಅಧ್ಯಕ್ಷರಾದ ದೇವಪ್ಪ ಈಳಗೇರ, ಕಾರ್ಯದರ್ಶಿ ನಾಗಮ್ಮ ಕುರುಬರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X