ಯಾದಗಿರಿ | ವಿದ್ಯಾರ್ಥಿ ತಲೆಗೆ ಹೊಡೆದ ಶಿಕ್ಷಕಿ ವಿರುದ್ಧ ಜೂ.13 ರಂದು ಪ್ರತಿಭಟನೆ

Date:

Advertisements

ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ತಲೆಗೆ ಹೊಡೆದಿದ್ದು, ತಲೆಗೆ ಬಲವಾಗಿ ಪೆಟ್ಟು ಬಿದಿರುವ ಘಟನೆ ಯಾದಗಿರಿ ನಗರದ ವಿದ್ಯಾರಣ್ಯ ಶಾಲೆಯಲ್ಲಿ ನಡೆದಿದ್ದು, ಈ ಘಟನೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಜೂನ್‌ 13ರಂದು ಪ್ರತಿಭಟನೆ ಹಮ್ಮಿಕೊಳ್ಞಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದ್ದಾರೆ.

ʼವಿದ್ಯಾರಣ್ಯ ಶಾಲೆಯಲ್ಲಿ 6ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಮನೀಷ್ ಎನ್ನುವ ವಿದ್ಯಾರ್ಥಿಗೆ ಶಾಲಾ ಶಿಕ್ಷಕಿಯೊಬ್ಬರು ತಲೆಗೆ ಕಟ್ಟಿಗೆ ರೂಲ್‌ನಿಂದ ಹೊಡೆದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ವಿದ್ಯಾರ್ಥಿಯನ್ನು ಸೋಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹಾಗೂ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆʼ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ʼವಿದ್ಯಾರ್ಥಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಅದಕ್ಕೆ ಸುಮಾರು 8 ರಿಂದ 10 ಲಕ್ಷ ರೂಪಾಯಿ ಖರ್ಚಾಗಲಿದ್ದು, ಹಣ ಹೊಂದಿಸಿಕೊಂಡು ಬಂದರೆ ಶಸ್ತ್ರ ಚಿಕಿತ್ಸೆ ನೀಡುವುದಾಗಿ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ವಿದ್ಯಾರಣ್ಯ ಶಾಲೆಗೆ ಸಂಬಂಧಪಟ್ಟವರನ್ನು ಭೇಟಿ ಮಾಡಲಾಗಿದ್ದು, ಯಾದಗಿರಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲʼ ಎಂದು ದೂರಿದರು.

Advertisements

ʼವಿದ್ಯಾರ್ಥಿಯ ಚಿಕಿತ್ಸೆಗೆ ತಗಲುವ ಖರ್ಚುವೆಚ್ಚ ಸಂಪೂರ್ಣ ಶಾಲಾ ಮಂಡಳಿ ಭರಿಸಬೇಕು. ಒಂದು ವೇಳೆ ಚಿಕಿತ್ಸೆ ವೆಚ್ಚ ಭರಿಸದೇ ಹೋದಲ್ಲಿ ಇದೆ ತಿಂಗಳು ಜೂ. 13ರಂದು ಶಾಲೆ ಗೇಟ್‌ಗೆ ಮುಳ್ಳು ಬಡೆದು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಜೀಜ್ ಸಾಬ್ ಐಕೂರು, ಮಲ್ಲಿಕಾರ್ಜುನ ಕುರಕುಂದಿ, ಮಹಾದೇವಪ್ಪ ಬಿಜಾಸಪೂರಕ‌ರ್, ಮಾನಪ್ಪ ಬಿಜಾಸಪೂರಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X