ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ

Date:

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್ ಗ್ರಾಮ ಪಂಚಾಯಿತಿ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಮೂಲಸೌಕರ್ಯದಿಂದ ವಂಚಿತವಾಗಿರುವ ಶಾಲೆ ಕುರಿತು ಸಾಮಾಜಿಕ ಕಾರ್ಯಕರ್ತ ಉಮೇಶ್‌ ಮುದ್ನಾಳ್‌ ಅವರ ಪತ್ರಿಕೆ ಹೇಳಿಕೆ ಮೇರೆಗೆ ಈ ದಿನ.ಕಾಮ್‌ ಜುಲೈ 27ರಂದು ʼಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆʼ ಎಂಬ ತಲೆಬರಹದಲ್ಲಿ ಸುದ್ದಿ ಪ್ರಕಟ ಮಾಡಿತ್ತು. ಇದನ್ನು ಗಮನಿಸಿದ ಸಂಬಂಧಪಟ್ಟ ಅಧಿಕಾರಿಗಳು ಒಂದೇ ದಿನದಲ್ಲಿ ಶಾಲೆಯತ್ತ ಧಾವಿಸಿದ್ದು, ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಗುರುಮಠಕಲ್ ಮತಕ್ಷೇತ್ರದ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ಕೊಣೆ, 1 ಅಡುಗೆ ಕೋಣೆ ಮುಟ್ಟಿದರೆ ಕುಸಿದು ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿ ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳ ಪೊಷಕರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಕಂಡು ಮಕ್ಕಳು ಮತ್ತು ಪೊಷಕರ ಜೊತೆ ಚರ್ಚಿಸಿ ಹೋರಾಟ ರೂಪಿಸಿದ್ದರು.

ಶಾಲೆಗೆ ಅಧಿಕಾರಿಗಳ ಭೇಟಿ
ಗಣಪೂರ ಶಾಲೆಗೆ ಅಧಿಕಾರಿಗಳ ಭೇಟಿ

ಈ ಕುರಿತು “ಗಣಫೂರ ಗ್ರಾಮದ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್‌ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತೇವೆ” ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದರು.

ಸಾಮಾಜಿಕ ಕಾರ್ಯಕರ್ತ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಓಡೋಡಿ ಬಂದು ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಾಲ್ಕು ತರಗತಿ ಕೋಣೆಗಳು, ಶೌಚಾಲಯ, ಅಡುಗೆ ಕೋಣೆ ಮತ್ತು ಶಾಲೆಯ ಹಿಂಭಾಗದಲ್ಲಿರುವ ಬೃಹತ್ ಮಲಿನ ನೀರಿನ ತಗ್ಗು ಗುಂಡಿಗಳನ್ನು ಸುಮಾರು 3 ತಾಸುಗಳ ಕಾಲ ಪರಿಶೀಲಿಸಿ ವಾಸ್ತವ ಅರಿತುಕೊಂಡು ಪೊಷಕರ, ಗ್ರಾಮ ಪಂಚಾಯಿತಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು” ಎಂದು ತಿಳಿಸಿದರು.

ಗಣಪೂರ ಶಾಲೆ

“ಶಾಲೆಯ ಸಮಸ್ಯೆ ಇಡೀ ಗ್ರಾಮದ ಸಮಸ್ಯೆಯಾಗಿದ್ದು, ಇದಕ್ಕೆ ರಾಜಕೀಯ ಬಣ್ಣ ನೀಡದೆ ಎಲ್ಲರೂ ಸಹಕಾರ ನೀಡಬೇಕು. ಕೇವಲ ನಾಮಕಾವಸ್ತೆಗೆ ಭೇಟಿ ಆಗಬಾರದು. ಸಮಸ್ಯೆ ಪರಿಹಾರವಾಗಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.

“ಶೌಚಾಲಯ ನೆಲಸಮಗೊಳಿಸಲು ನಿರ್ಧರಿಸಿ, ಮಲಿನ ನೀರು ನಿಂತ ತಗ್ಗು ಗುಂಡಿಗಳಿಗೆ ಮಣ್ಣು ತುಂಬಿಸಿ ಬ್ಲೀಚಿಂಗ್ ಪೌಡರ್ ಸಿಂಪಡಿಸಲು ಸೂಚಿಸಿದರು. ಶಿಥಿಲಗೊಂಡ ನಾಲ್ಕು ಕೋಣೆಗಳು ಮತ್ತು ಅಡುಗೆ ಕೋಣೆಯನ್ನು ನೆಲಸಮಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಅಧಿಕಾರಿಗಳು ಪತ್ರ ಬರೆದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆ

“ನಾಲ್ಕು ಕೋಣೆಗಳಿಗೆ ನಿರ್ಬಂಧ ವಿಧಿಸಿ, ಅಲ್ಲಿ ಪಾಠ ಪ್ರವಚನ ಮಾಡದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಅಡುಗೆ ಕೋಣೆಯನ್ನೂ ನೆಲಸಮ ಮಾಡಲು ನಿರ್ಧರಿಸಲಾಯಿತು. ಬೇರೆ ಸ್ಥಳದಲ್ಲಿ ಅಡುಗೆ ಕೋಣೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಾ ಪಂ ಸಹಾಯಕ ನಿರ್ದೇಶಕರು ಭರವಸೆ ನೀಡಿದ್ದಾರೆ” ಎಂದು ಉಮೇಶ್ ಮುದ್ನಾಳ್ ತಿಳಿಸಿದರು.

ಈ ಸಂದರ್ಭದಲ್ಲಿ ಆಂಜಿನೇಯ ಬೆಳಗೇರಿ, ತಾಯಪ್ಪ ಕಾಳಬೆಳಗುಂದಿ, ಗಣಪೂರ ಗ್ರಾಮದ ಮುಖಂಡರುಗಳಾದ ನರಸಪ್ಪ, ಶಂಕರ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ, ಗ್ರಾಪಂ ಸದಸ್ಯ ನರಸಿಂಗಪ್ಪ, ಭೀಮರಾಯ, ತಾಯಪ್ಪ ಹೊಸಡಿ, ನಿಂಗಪ್ಪ, ಚೆನ್ನಪ್ಪ, ಭೀಮರಾಯ ಬಂಕಲಗಿ, ಕಾಂತು, ಆಂಜಿನೇಯ, ಮಾದೇವಪ್ಪ, ಮಾದೇವ, ತಾಯಪ್ಪ ನವಾಬುರಜ ಸೇರಿದಂತೆ ಬಹತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...