ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ

Date:

Advertisements

ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ.

ಪಿಎಸ್‌ಐ ಪತ್ನಿ ಶ್ವೇತಾ ನೀಡಿದ್ದ ದೂರಿನ ಮೇರೆಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ(ಸನ್ನೇ ಗೌಡ) ಮೇಲೆ ಪ್ರಕರಣ ದಾಖಲಾಗಿದೆ. ಇದರಿಂದ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ಮೃತ ಪಿಎಸ್‌ಐ ಪರಶುರಾಮ್ ಸಾವಿನ ತನಿಖೆ ನಡೆಸಲು ಆದೇಶಿಸಿದ್ದರು.

ಇದರ ಬೆನ್ನಲ್ಲೇ ಸಿಐಡಿ ಪೋಲಿಸ್ ಡಿವೈಎಸ್‌ಪಿ ಪುನೀತ್ ಹಾಗೂ ಅಧಿಕಾರಿಗಳ ನೇತೃತ್ವದ ತಂಡ ಮೊದಲಿಗೆ ಯಾದಗಿರಿ ಡಿವೈಎಸ್‌ಪಿ ಬಸವೇಶ್ವರ ಹಾಗೂ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ಹಣಮಂತ ಬಂಕಲಗಿ ಅವರನ್ನು ವಿಚಾರಣೆ ನಡೆಸಿದರು. ಪ್ರಕರಣದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಪ್ರಕರಣ ಗಂಭೀರತೆ ಪಡೆದುಕೊಂಡಿದ್ದು, ಸಿಐಡಿ ತಂಡವು ಎಲ್ಲ ಆಯಾಮಾಗಳಲ್ಲಿ ತನಿಖೆಗೆ ಮುಂದಾಗಿದೆ.

Advertisements

ಹಲವು ಮಹತ್ವದ ದಾಖಲೆ ವಶಕ್ಕೆ:

ಪಿಎಸ್‌ಐ ಪರಶುರಾಮ್ ಸಾವಿನ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ದಾಖಲೆಗಳನ್ನು ಹಾಗೂ ಪೆನ್‌ಡ್ರೈವ್, ಜೊತೆಗೆ ಮೊಬೈಲ್ ಫೋನ್ ಮೂಲಕ ನಡೆದ ಮಾತುಕತೆ ಹೀಗೆ ಮಹತ್ವದ ದಾಖಲೆಗಳನ್ನು ಬೆಂಗಳೂರಿನ ಸಿಐಡಿ ತಂಡ ತೆಗೆದುಕೊಂಡು ತನಿಖೆ ಆರಂಭಿಸಿದೆ.

ಪ್ರಕರಣದಲ್ಲಿ ಫೋನ್ ಸಂಭಾಷಣೆಯಲ್ಲಿ ನಡೆದ ವರ್ಗಾವಣೆಯ ಬಗ್ಗೆ ಫೋನ್ ಕಾಲ್ ಪರಿಶೀಲನೆ, ಪತ್ನಿ ಹಾಗೂ ಸಹಚರರ ಹೇಳಿಕೆ ಹೀಗೆ ಎಲ್ಲ ಆಯಾಮಗಳಲ್ಲಿ ಪ್ರಕರಣದ ಜಾಡು ಹಿಡಿದು ಸಿಐಡಿ ತಂಡ ತನಿಖೆ ನಡೆಸುತ್ತಿದೆ.

1001197745

ಪರಶುರಾಮ್ ಸಾವಿನ ಪ್ರಕರಣ ಸದ್ಯ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪರಶುರಾಮ್​ ಮನೆಗೆ ಭಾನುವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ‌ಅಲ್ಲದೇ, ಪ್ರಕರಣವನ್ನು ಸಿಐಡಿ ಬದಲಿಗೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ‌.

ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ತನಿಖೆಯಿಂದಷ್ಟೇ ಎಲ್ಲಾ ಸತ್ಯ ಹೊರಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X