ಯಾದಗಿರಿ | ಭೂ-ಒಡೆತನ ಯೋಜನೆ ಜಾರಿಗೊಳಿಸಲು ಸಮತಾ ಸೈನಿಕ ದಳ ಪ್ರತಿಭಟನೆ

Date:

ಭೂ-ಒಡೆತನ ಯೋಜನೆಯನ್ನು ತಕ್ಷಣ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊಸ ಸಮಿತಿ ರಚಿಸಿ ಭೂಹೀನ ದಲಿತ ಕುಟುಂಬಗಳಿಗೆ ಭೂಮಿ ಹಂಚಿಕೆ ಮಾಡಬೇಕು. ಜೊತೆಗೆ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಬೆಳೆಸಾಲ ಮನ್ನಾ ಮಾಡಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಹತ್ತಿಗುಡೂರ ಶರಣರೆಡ್ಡಿ, ‘2019-20ನೇ ಸಾಲಿನಲ್ಲಿ ಭೂ-ಒಡೆತನ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಿ ಪ್ರಕ್ರಿಯೆ ಆರಂಭಿಸಲಾಗಿದ್ದರೂ, ಕಳೆದ ಐದು ವರ್ಷಗಳಿಂದ ಯೋಜನೆ ಸ್ಥಗಿತಗೊಂಡಿದೆ. ಇದರಿಂದ ಭೂಮಿ ನೀಡಲು ಒಪ್ಪಿಗೆ ನೀಡಿದ ಭೂಮಾಲೀಕರು ಹಾಗೂ ಭೂಹೀನ ದಲಿತ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

‘ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಕ್ಷಣವೇ ಹೊಸ ಸಮಿತಿ ರಚಿಸಿ ಭೂಮಿಯ ಮೌಲ್ಯ ನಿಗದಿಪಡಿಸಿ ಅರ್ಹ ಫಲಾನುಭವಿಗಳಿಗೆ ಭೂಮಿ ಹಂಚಿಕೆ ಮಾಡಬೇಕು. ಹತ್ತಿಗೂಡೂರು, ಐಕೂರು, ಮಾಲಹಳ್ಳಿ, ನಾಯ್ಕಲ್, ಚಟ್ನಳ್ಳಿ, ಬಲಕಲ್, ಮರಮಕಲ್, ದೋರನಹಳ್ಳಿ, ಇಂಗಳಗಿ, ಬಸವಂತಪುರ, ಹಯ್ಯಾಳ (ಬಿ), ಇಟ್ಟಿಗಿ, ಶಿರವಾಳ, ಕೊಂಗಂಡಿ, ಯಕ್ಷಿಂತಿ, ಬೊಮ್ಮನಹಳ್ಳಿ, ಅನವಾರ, ಕೊಳ್ಳೂರು, ತುಮಕೂರು, ಕಾಡೆಮೆಗೆರೆ ಸೇರಿದಂತೆ ವಿವಿಧ ಗ್ರಾಮಗಳ ಭೂಹೀನ ದಲಿತ ಕುಟುಂಬಗಳನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

‘ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಬೆಳೆಸಾಲ ಮನ್ನಾ ಮಾಡಬೇಕು, ಬರ ಪರಿಹಾರವನ್ನು ಶೀಘ್ರ ವಿತರಿಸಬೇಕು ಹಾಗೂ ಜಿಲ್ಲೆಯ ಎಲ್ಲಾ ಅರ್ಹ ದಲಿತ ಕುಟುಂಬಗಳಿಗೆ ವಸತಿ ಮನೆಗಳನ್ನು ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

‘ಈ ಹಿಂದೆಯೂ ಹಲವು ಬಾರಿ ಮನವಿ ಸಲ್ಲಿಸಿ ಹೋರಾಟ ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಮಹಿಳಾ ಜಿಲ್ಲಾ ಸಮಿತಿಯಿಂದ ಉಪವಾಸ ಸತ್ಯಾಗ್ರಹ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಆಸ್ತಿ ವರ್ಗಾವಣೆ ಕಡತಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಾರ್ಯದರ್ಶಿ

ಪ್ರತಿಭಟನೆಯಲ್ಲಿ ಹಿರಿಯ ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ, ಭೀಮರಾಯ ದೋರನಹಳ್ಳಿ, ಶರಣಪ್ಪ ಕಡಿಮನಿ ಅನಕಸೂಗೂರು, ಶರಣಪ್ಪ ಚಲುವಾದಿ ಸೇರಿದಂತೆ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...