ಯಾದಗಿರಿ | ಹಾಲಿನಪುಡಿ ಪೂರೈಕೆ ಸ್ಥಗಿತ; ವಿತರಣೆಗೆ ಎಐಡಿಎಸ್‌ಒ ಆಗ್ರಹ

Date:

ನಾಲ್ಕು ತಿಂಗಳಿನಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನಪುಡಿ ಪೂರೈಕೆ ಆಗಿಲ್ಲ. ಕೂಡಲೇ ಹಾಲಿನ ಪುಡಿ ವಿತರಣೆ ಆರಂಭವಾಗಬೇಕು ಎಂದು ಎಐಡಿಎಸ್‌ಒ ಆಗ್ರಹಿಸಿದೆ.

ಯಾದಗಿರಿಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಮುಖಂಡೆ ಶಿಲ್ಪಾ ಬಿ.ಕೆ, “ಕಳೆದ ಮೂರು ನಾಲ್ಕು ತಿಂಗಳಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಹಾಲಿನಪುಡಿ ಪೂರೈಕೆ ಆಗಿಲ್ಲ. ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಹಾಲಿನ ಸೇವನೆಯು ಅತ್ಯವಶ್ಯಕವಾಗಿದೆ. ಸರ್ಕಾರದ ಈ ಲೋಪವು ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ 36 ಲಕ್ಷಕ್ಕೂ ಅಧಿಕ ಮಕ್ಕಳನ್ನು ಹಾಗೂ 6 ಲಕ್ಷಕ್ಕೂ ಹೆಚ್ಚು ಮಂದಿ ಗರ್ಭಿಣಿ ಹಾಗೂ ಬಾಣಂತಿಯರನ್ನು ಹಾಲಿನಿಂದ ವಂಚಿತರನ್ನಾಗಿಸಿದೆ” ಎಂದು ಆರೋಪಿಸಿದರು.

ಆಡಳಿತ ಸರ್ಕಾರವು ಈಗಾಗಲೇ ಅವಶ್ಯಕತೆ ಇರುವುದಕ್ಕಿಂತ 5 ಪಟ್ಟು ಕಡಿಮೆ ಹಾಲಿನಪುಡಿ ಪೂರೈಕೆ ಮಾಡುತ್ತಿದೆ. ಮೂರರಿಂದ ಆರು ವರ್ಷದ ಒಳಗಿನ ಒಂದು ಮಗುವಿನ ಸಮರ್ಪಕ ಬೆಳವಣಿಗೆಗೆ ದಿನಕ್ಕೆ ಕನಿಷ್ಟ 450 ಮಿಲಿ ಲೀಟರ್ ಹಾಲಿನ ಅವಶ್ಯಕತೆ ಇದೆ. ಅಂದರೆ 70 ಗ್ರಾಂ ಹಾಲಿನ ಪೌಡರ್ ಬದಲಿಗೆ ಸರ್ಕಾರ ಕೇವಲ 15 ಗ್ರಾಂನಷ್ಟು ವಿತರಿಸುತ್ತಿದೆ. ಬಡತನ ಮತ್ತು ಆರ್ಥಿಕ ಬಿಕ್ಕಟಿನಿಂದಾಗಿ ರಾಜ್ಯದಲ್ಲಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚಿದೆ. ನಮ್ಮ ದೇಶದಲ್ಲಿ ಪ್ರತಿದಿನ ಹಸಿವು ಮತ್ತು ಅಪೌಷ್ಟಿಕತೆಯಿಂದಾಗಿ 5000ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಮಕ್ಕಳ ಪೌಷ್ಟಿಕಾಂಶಗಳ ಪೂರೈಕೆಗಾಗಿ ಲಕ್ಷಾಂತರ ಕುಟುಂಬಗಳು ಅಂಗನವಾಡಿ ಕೇಂದ್ರಗಳ ಮೇಲೆ ಅವಲಂಬಿತವಾಗಿವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ‘ಜಾನುವಾರು ರೋಗ’ದ ನೆಪದಲ್ಲಿ ಹಾಲಿನ ಪುಡಿ ಕೊರತೆ ಹುಟ್ಟು ಹಾಕುತ್ತಿದೆ. ಹಾಗಾದಾಗ, ಹಾಲಿನ ಪುಡಿ ಪೂರೈಕೆಯನ್ನು ಖಾಸಗಿ ಸಂಸ್ಥೆ ʼಅಮೂಲ್ʼ ವಹಿಸಿಕೊಂಡು, ಮಾರುಕಟ್ಟೆಗೆ ಪ್ರವೇಶ ಮಾಡುವಂತೆ ಸರ್ಕಾರವೇ ನೇರ ಸಹಾಯ ಮಾಡುತ್ತಿದೆ ಎಂಬ ಗುಮಾನಿಯು ಜನಸಾಮಾನ್ಯರನ್ನು ಕಾಡುತ್ತಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸಿಡಿಲು ಬಡಿದು ಮಹಿಳೆ ಸಾವು

“ಏಕಾಏಕಿ ಹಾಲಿನಪುಡಿ ಪೂರೈಕೆ ನಿಲ್ಲಿಸಿರುವುದು ಸರ್ಕಾರವು ಮಕ್ಕಳಿಗೆ ಮಾಡಿರುವ ದ್ರೋಹ ಎಂದೇ ನಾವು ಭಾವಿಸುತ್ತೇವೆ. ಹಾಲಿನ ಕೊರತೆಯು ಲಕ್ಷಾಂತರ ಮಕ್ಕಳ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಒಂದು ವೇಳೆ ರಾಜ್ಯದಲ್ಲಿ ಹಾಲಿನಪುರಿ ಪೂರೈಕೆ ಕೊರತೆ ಇದ್ದರೆ ಆ ಕುರಿತು ಕೂಡಲೇ ಗಮನಹರಿಸಲಿ. ಒಟ್ಟಾರೆ ಪರಿಸ್ಥಿತಿಯ ತೀವ್ರತೆಯನ್ನು ಅರಿತು ಕೂಡಲೇ ಹಾಲಿನಪುಡಿ ಪೂರೈಕೆಗೆ ಒತ್ತು ನೀಡಬೇಕು. ಕೂಡಲೇ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪುಡಿ ಪೂರೈಸಬೇಕು” ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಆಗ್ರಹಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...