- ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಜಗಳ ತಿಳಿಗೊಳಿಸಿದ ಸ್ಥಳೀಯರು
- ಚಿಂಚನಸೂರ ಬಳಿ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿದರು
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಯದ್ಲಾಪುರ ಗ್ರಾಮದ ಹೊರವಲಯದ ಮೌಲಾಲಿ ಬೆಟ್ಟದ ಮೇಲಿನ ಮೌಲಾಲಿ ದರ್ಗಾಕ್ಕೆ ಯದ್ಲಾಪುರ ಗ್ರಾಮಸ್ಥರೊಬ್ಬರು ದೇವರ ಕಾರ್ಯ (ಹರಕೆ ತೀರಿಸುವುದು) ಮಾಡಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ಸಿ ಬಾಬುರಾವ ಚಿಂಚನಸೂರ ಭಾಗವಹಿಸಿ ಹಿಂದಿರುಗಿದ್ದರು.
ಚಿಂಚನಸೂರ ಅವರು ಬಂದಾಗ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡಿದ್ದರು. ಅವರ ಸಮಸ್ಯೆಗಳನ್ನು ಆಲಿಸಿ, ಚಿಂಚನಸೂರ ಹಿಂದಿರುಗಿದರು. ಬಳಿಕ, ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಪೂರ್ವ ಮುಂಗಾರು ಮಳೆಗೆ ಮನೆ ಕುಸಿತ; ತಂದೆ ಮಕ್ಕಳು ಅಪಾಯದಿಂದ ಪಾರು
ಮಾತಿಗೆ ಮಾತು ಬೆಳೆದು ಕೈ-ಕೈ ಮಿಲಾಯಿಸುವ ಮೂಲಕ ಹೊಡೆದಾಡಿದ್ದಾರೆ. ನಂತರ ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.