ಯಾದಗಿರಿ | ವಿದ್ಯಾರ್ಥಿನಿಯರ ಜೊತೆ ವಾರ್ಡನ್‌ ಅನುಚಿತ ವರ್ತನೆ; ಆರೋಪ

Date:

ಮೆಟ್ರಿಕ್ ನಂತರದ ಬಾಲಕಿಯರ ಸರ್ಕಾರಿ ವಸತಿ ನಿಲಯದ ವಾರ್ಡನ್ ಶಾಂತಮ್ಮ ಅವರು ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಲ್ಲದೆ, ನಿಲಯವು ಅವ್ಯವಸ್ಥೆಯಿಂದ ಕೂಡಿದೆ. ವಾರ್ಡನ್‌ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

“ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡನ್ ಶಾಂತಮ್ಮ ವಿದ್ಯಾರ್ಥಿನಿಯರ ಜೊತೆ ಹಾಗೂ ಸಾರ್ವಜನಿಕರ ಜೊತೆಗೆ ಅನುಚಿತ ವರ್ತನೆ ತೋರುತ್ತಿದ್ದು, ಅವಾಚ್ಯ ಶಬ್ದಗಳಿಂದ ಬೈಯುತ್ತಾರೆಂದು ತಿಳಿದುಬಂದಿದೆ. ಅಲ್ಲದೆ, ವಾರ್ಡನ್ ಸರಿಯಾಗಿ ವಸತಿ ನಿಲಯಕ್ಕೆ ಬರುವುದಿಲ್ಲ. ವಿದ್ಯಾರ್ಥಿನಿಯರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂಬ ಆರೋಪಗಳು ವ್ಯಕ್ತವಾಗಿವೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈ ಹಿಂದೆ ಇದೇ ರೀತಿಯಾಗಿ ಕೆಟ್ಟದಾಗಿ ನಡೆದುಕೊಂಡಿದ್ದರಿಂದ ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿ ವಾರ್ಡನ್‌ ಶಾಂತಮ್ಮನ್ನು ಬೇರೆಡೆಗೆ ವರ್ಗಾಯಿಸಬೇಕೆಂದು ಆಗ್ರಹಿಸಿ ಇವರ ವಿರುದ್ಧ ಪ್ರತಿಭಟನೆ ಮಾಡಿದ್ದರಿಂದ ಬೇರೆ ಕಡೆ ಹಾಕಲಾಗಿತ್ತು. ಆದರೆ ಮತ್ತೆ ಇದೇ ವಸತಿ ನಿಲಯಕ್ಕೆ ಬಂದಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಅವಾಚ್ಯ ಶಬ್ದಗಳಿಂದ ಬೈಯ್ಯುವುದು, ಮಕ್ಕಳೊಂದಿಗೆ ಅಸಭ್ಯ ವರ್ತನೆ ತೋರುತ್ತಿರುವುದು ತಿಳಿದುಬಂದಿದೆ” ಎಂದು ಆರೋಪಿಸಿದರು.

“ಗುರುಮಠಕಲ್‌ನ ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ವಸತಿ ನಿಲಯದ ಚಾರ್ಜ್ ಕೂಡಾ ಶಾಂತಮ್ಮನಿಗೆ ಇದೆ. ಆದರೆ, ಈವರೆಗೆ ವಸತಿ ನಿಲಯ ಪ್ರಾರಂಭ ಮಾಡಿಲ್ಲ. ಹಾಗಾಗಿ ತಾವು ದಯಮಾಡಿ ಈ ವಾರ್ಡನ್ ಮೇಲೆ ಶಿಸ್ತು ಕ್ರಮ ಕೈಗೊಂಡು ಅಮಾನತುಗೊಳಿಸಬೇಕು” ಎಂದು ಮನವಿ ಮಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ. ತಿಪ್ಪೇಸ್ವಾಮಿ

“ಒಂದು ವೇಳೆ ತಾವು ಕ್ರಮ ಕೈಗೊಳ್ಳದೇ ಇದ್ದಲ್ಲಿ ತಮ್ಮ ಕಚೇರಿ ಮುಂದೆ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕಾಶಪ್ಪ ಹೆಗ್ಗಣಗೇರಾ, ಮಲ್ಲು ಬೆಳಗೇರಾ, ಚಂದ್ರು ನಡುಮನಿ, ದೇವಿಂದ್ರಪ್ಪ ಮುಷ್ಟೂರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...