ಯಾದಗಿರಿ | ಶಿಕ್ಷಣದಿಂದ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ: ಸ್ಯಾಮ್ಸನ್ ಬಂಟು

Date:

Advertisements

ಕಳೆದ ಒಂದು ವರ್ಷದಿಂದ ವಿಶೇಷ ಪರಿಹಾರ ಬೋಧನಾ ಕೇಂದ್ರದಲ್ಲಿ ಪ್ರತಿದಿನ ಸಂಜೆ 5 ರಿಂದ 7 ಗಂಟೆಯವರೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಇಂತಹ ವಿಶೇಷ ಪರಿಹಾರ ಭೋದನಾ ಕೇಂದ್ರಗಳನ್ನು ವರ್ಲ್ಡ್ ವಿಜನ್ ಇಂಡಿಯಾ ಸಂಸ್ಥೆಯು ಜಿಲ್ಲೆಯ 10 ಆಯ್ದ ಗ್ರಾಮಗಳಲ್ಲಿ ನಡೆಸುತ್ತಿದೆ. ಈ ಯೋಜನೆಯು ಹಿಂದುಳಿದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿ ಆಗಲಿದೆ ಎಂದು ರಾಷ್ಟ್ರೀಯ ಕಚೇರಿಯ ಉಪ ನಿರ್ದೇಶಕ ಸ್ಯಾಮ್ಸನ್ ಬಂಟು ಹೇಳಿದರು.

ಗುರುವಾರ ಶಹಾಪುರ್ ತಾಲೂಕಿನ ಕಾನ್ಯಕುಳ್ಳೂರ ಗ್ರಾಮದ ಜಾಪಾನಾಯಕ್ ತಾಂಡದಲ್ಲಿ ವರ್ಲ್ಡ್ ಮಿಜನ್ ಇಂಡಿಯಾ ಸಂಸ್ಥೆ ವತಿಯಿಂದ ವಿಶೇಷ ಪರಿಹಾರ ಬೋಧನಾ ಕೇಂದ್ರದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಕಥೆಗಳ ಮೂಲಕ ಶಿಕ್ಷಣದ ಮಹತ್ವವನ್ನು ಮನವರಿಕೆ ಮಾಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ಅನಿಲ್ ತೇಜಪ್ಪ ಮಾತನಾಡಿ, ‘ಸಂಸ್ಥೆಯ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡುವುದರ ಜೊತೆಗೆ ಅನೇಕ ಫಲಾನುಭವಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯ ನೀಡಲಾಗಿದೆ’ ಎಂದು ಹೇಳಿದರು.

ಈ ವೇಳೆ ಮುಖ್ಯ ಗುರು ಅಬ್ದುಲ್‌ ಹಮೀದ್ ಮಾತನಾಡಿ, ‘ಈ ಕಾರ್ಯಕ್ರಮದ ಹಿನ್ನೆಲೆ ಗ್ರಾಮದಲ್ಲಿ ಹಬ್ಬದ ವಾತಾವರಣವಿತ್ತು. ಮಕ್ಕಳಲ್ಲಿ ಉತ್ಸಾಹ ಹೆಚ್ಚಾಗಿದ್ದು, ಪೋಷಕರು ಸಹ ಭಾಗವಹಿಸಿ ಸಂತೋಷ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಘೋಷಿತ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡಿ: ಸ್ಲಂ ಜನಾಂದೋಲನದಿಂದ ಸಿಎಂಗೆ ಮನವಿ

ಈ ಸಂದರ್ಭದಲ್ಲಿ ಮೌನೇಶ್, ಹನುಮಂತ್, ಮಾರುತಿ ಚೌಹಾಣ್, ಶಂಕರ್ ಪೂಜಾರಿ, ಅಬ್ದುಲ್ ಅಹಮದ್, ಅನಿತಾ ಚವಾನ್, ತಾರಾಬಾಯಿ, ರಾಬರ್ಟ್, ಮೈಕಲ್, ಮೆನಕಾ, ಸಿದ್ದಮ್ಮ, ಶಿವು, ಅಶೋಕ್, ಶರಣು, ರೇಖಾ, ಮಂಜುಳಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X