ಯಾದಗಿರಿ | ಸಾಲ ಮರುಪಾವತಿಗೆ ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ಕಿರುಕುಳ : ಮಹಿಳೆಯರ ಆರೋಪ

Date:

Advertisements

ಕೃಷ್ಣ ಭೀಮಾ ಸಮೃದ್ಧಿ ಲೋಕಲ್‌ ಏರಿಯಾ ಬ್ಯಾಂಕ್‌ ಲಿಮಿಟೆಡ್‌ (ಕೆಬಿಎಸ್) ಬ್ಯಾಂಕ್‌ ಸಿಬ್ಬಂದಿ ಸಾಲ ಮರುಪಾವತಿಸುವಂತೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಈ ಸಂಬಂಧ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದ ಮಹಿಳೆಯರು ಯಾದಗಿರಿ ಗ್ರಾಮೀಣ ಠಾಣೆಗೆ ಮನವಿ ಸಲ್ಲಿಸಿದ್ದು, ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ʼಕೃಷಿ ಕೂಲಿ ಕಾರ್ಮಿಕರಾದ ನಾವು ಬ್ಯಾಂಕ್‌ನಿಂದ ಸಾಲ ಪಡೆದು ಮರುಪಾವತಿ ಮಾಡುತ್ತಿದ್ದೇವೆ. ಇನ್ನೂ ಒಂದಿಷ್ಟು ಸಾಲ ಬಾಕಿ ಇದೆ. ಆದರೆ ಸದ್ಯಕ್ಕೆ ಯಾವುದೇ ಕೆಲಸ ಇಲ್ಲದ ಕಾರಣ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇದಕ್ಕೆ ಅವಕಾಶ ಕೊಡದ ಕೆಬಿಎಸ್ ಬ್ಯಾಂಕ್ ಸಿಬ್ಬಂದಿ ಪ್ರತಿದಿನ ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisements

ʼಕೆಬಿಎಸ್ ಬ್ಯಾಂಕ್ ಫೈನಾನ್ಸ್ ಸಿಬ್ಬಂದಿ ಸಾಲಗಾರರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ದು, ಮನಸ್ಸಿಗೆ ಬೇಜಾರು ಮಾಡಿದ್ದಾರೆ. ಇದರಿಂದ ನಮ್ಮ ಜೀವಕ್ಕೆ ಏನಾದರೂ ಅನಾಹುತವಾದರೆ ಬ್ಯಾಂಕ್‌ ಸಿಬ್ಬಂದಿಯೇ ಕಾರಣರಾಗುತ್ತಾರೆ. ಕೂಡಲೇ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಿ ನಮಗೆ ನ್ಯಾಯ ಒದಗಿಸಿʼ ಎಂದು ಕೋರಿದ್ದಾರೆ.

ಇದನ್ನೂ ಓದಿ : ಯಾದಗಿರಿ | ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ ಮೇಲೆ ದೂರು : ಪ್ರಾಂತ ರೈತ ಸಂಘ ಖಂಡನೆ

ಈ ಸಂದರ್ಭದಲ್ಲಿ ಶಾಣಮ್ಮ ಹನುಮಂತ, ನಿಂಗಮ್ಮ ನಿಂಗಪ್ಪ, ಮಲ್ಲಮ್ಮ ಚನ್ನಬಸಪ್ಪ, ಬಸಮ್ಮ ವೆಂಕಟೇಶ್, ಲಕ್ಷ್ಮೀ ರಾಮಣ್ಣ, ಪದ್ಮಾವತಿ, ಅನುಸಮ್ಮ, ನಾಗಮ್ಮ ಮಹಾದೇವಮ್ಮ , ನಾಗಮ್ಮ , ಪಾರ್ವತಿ , ನಾಗಮ್ಮ, ದೇವಿದ್ರಮ್ಮ, ಬಸಮ್ಮ ಮತ್ತಿತರರು ಇದ್ದರು.

ವರದಿ: ಸುಧೀರ್ ಕೋಟಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X