ಯಾದಗಿರಿ | ರೈತರಿಂದ ಗಾಂಧಿ ಜಯಂತಿ ಆಚರಣೆ; ಸುರಪುರ ತಾಲೂಕು ಬರಪೀಡಿತ ಘೋಷಣೆಗೆ ಒತ್ತಾಯ

Date:

Advertisements

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಟೇಲರ್ ಮಂಜಿಲ್‌ನಲ್ಲಿ ಸಭೆ ಸೇರಿ 154ನೇ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳರ ಸುರಪುರ ಮಾತನಾಡಿ, “ಗಾಂಧೀಜಿಯವರು 1859ರ ಅಕ್ಟೋಬರ್ ೦೨ರಂದು ಜನಿಸಿದರು. ನಮ್ಮ ದೇಶದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ನಂತರ ಅವರನ್ನು ಮಹಾತ್ಮ ಎಂದು ಕರೆಯಲಾಯಿತು. ಏಕೆಂದರೆ, ಅವರು ತಾಳ್ಮೆ, ಸಹನೆ, ಅಹಿಂಸೆಯಿಂದ ಹೋರಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅಂದು ಅವರೆಲ್ಲ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎನ್ನುವ ಕಾರಣಕ್ಕೆ, ಇಂದು ಎಲ್ಲಾ ಜಾತಿ ಜನಾಂಗದವರು ನೆಮ್ಮದಿಯಿಂದ ಬಾಳಬೇಕಾಗಿದೆ. ಇಲ್ಲವಾದಲ್ಲಿ ನಾವಿನ್ನೂ ಪರಕೀಯರ ಗುಲಾಮಗಿರಿಯಲ್ಲಿ ಇರಬೇಕಾಗಿರುತ್ತಿತ್ತು. ಅವರನ್ನು ನಾವು ಇವತ್ತು ಸ್ಮರಿಸಬೇಕು.

ಇದೇ ವೇಳೆ, ರಾಜ್ಯದ 161 ತಾಲೂಕುಗಳನ್ನು ಬರಗಾಲವೆಂದು ಘೋಷಣೆ ಮಾಡಿದೆ. ಆದರೆ, ಯಾದಗಿರಿ ಜಿಲ್ಲೆಯ ಆರು ತಾಲೂಕುಗಳ ಪೈಕಿ ಕೇವಲ ಎರಡು ತಾಲೂಕುಗಳಾದ ಶಹಾಪುರ, ವಡಿಗೇರಾ ಬರಗಾಲವೆಂದು ಘೋಷಣೆ ಮಾಡಿದ್ದಾರೆ. ಇನ್ನುಳಿದ ಸುರಪುರ, ಹುಣಸಗಿ, ಗುರುಮಿಠಕಲ್, ಯಾದಗಿರಿ ಈ ನಾಲ್ಕು ತಾಲೂಕುಗಳಲ್ಲಿ ಸಾಧಾರಣ ಬರಗಾಲವೆಂದು ಘೋಷಣೆ ಮಾಡಿ, ಮಲತಾಯಿ ಧೋರಣೆ ತೋರಿಸಿರುವುದು ಖಂಡನೀಯ. ಈ ಕೂಡಲೇ ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿ, ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

Advertisements

ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಾ ಅಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ಸುರಪುರ ತಾಲೂಕ ಸಂಚಾಲಕ ಭೀಮಣ್ಣ ತಿಪ್ಪನಟಗಿ, ನಿಂಗನಗೌಡ ಗುಳಬಾಳ ಗ್ರಾಮ ಘಟಕ ಅಧ್ಯಕ್ಷ ಭೀಮಣ್ಣಗೌಡ ಕರ್ನಾಳ, ಸುರಪುರ ತಾಲೂಕಾ ಉಪಾಧ್ಯಕ್ಷ ಶಂಕ್ರಪ್ಪ ಗುಳಬಾಳ ಸೇರಿದಂತೆ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ...

ಯಾದಗಿರಿ | ಆಸರೆಯಾಗಿದ್ದ ಮನೆಯೂ ಮಳೆಗೆ ಕುಸಿತ: ನೆರವಿನ ನಿರೀಕ್ಷೆಯಲ್ಲಿ ದೋರನಹಳ್ಳಿ ನಿವಾಸಿ ಅಮಲವ್ವ

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದ ನಿವಾಸಿಯಾಗಿರುವ ಅಮಲವ್ವ ಕಡು ಬಡ ಕುಟುಂಬದವರಾಗಿದ್ದು,...

ಯಾದಗಿರಿ | ಆ.14ರಂದು ಪ್ರತಿಭಟನೆಗೆ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ಕರೆ

ಬುಧವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ...

ಯಾದಗಿರಿ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ...

Download Eedina App Android / iOS

X