ಯಾದಗಿರಿ | ಸರ್ಕಾರಿ ಶಾಲೆಗಿಲ್ಲ ಸ್ವಂತ ಕಟ್ಟಡ; ಸಮುದಾಯ ಭವನದಲ್ಲೇ ಪಾಠ

Date:

Advertisements

ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡವಿಲ್ಲದೆ, ವಿದ್ಯಾರ್ಥಿಗಳು ಸಮುದಾಯ ಭವನದಲ್ಲಿ ಪಾಠ ಕೇಳುತ್ತಿರುವ ಪರಿಸ್ಥಿತಿಗೆ ಯಾದಗಿರಿ ನಗರದ ವಾಲ್ಮೀಕಿ ಬಡಾವಣೆಯಲ್ಲಿ ಸಾಕ್ಷಿಯಾಗಿದೆ.

ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿಯೇ ಸರ್ಕಾರಿ ಶಾಲೆಯೊಂದಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವುದು ಶಿಕ್ಷಣ ಕ್ಷೇತ್ರದ ಮೇಲಿನ ಸರ್ಕಾರ ಮತ್ತು ಅಧಿಕಾರಗಳ ಬೇಜವ್ದಾರಿ ಧೋರಣೆಗೆ ಕನ್ನಡಿ ಹಿಡಿದೆ. ವಾಲ್ಮೀಕಿ ಬಡಾವಣೆಯಲ್ಲಿ ಶಾಲೆ ಆರಂಭವಾಗಿ 17 ವರ್ಷಗಳು ಕಳೆದಿದ್ದರೂ, ಶಾಲೆಗೆ ಇನ್ನೂ ಸ್ವಂತ ಕಟ್ಟಡ ನಿರ್ಮಾಣವಾಗಿಲ್ಲ. ಹೀಗಾಗಿ, ಬಡಾವಣೆಯ ಮಶಮ್ಮ ದೇವಾಲಯದ ಸಮುದಾಯ ಭವನದಲ್ಲೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ವಾಲ್ಮೀಕಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. 1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ, ಯಾವ ಸರ್ಕಾರವೂ ಶಾಲೆಗೆ ಕಟ್ಟಡ ಮಂಜೂರು ಮಾಡಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.

Advertisements

ಇತ್ತ ಶಾಲಾ ಕಟ್ಟಡವೂ ಇಲ್ಲದೆ, ಅತ್ತ ಅಗತ್ಯವಿರುವಷ್ಟು ಶಿಕ್ಷಕರೂ ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆಯಾಗುತ್ತಿದೆ. ಮಾತ್ರವಲ್ಲದೆ, ದೇವಸ್ಥಾನದ ಯಾವುದಾದರೂ ಕಾರ್ಯಕ್ರಮವಿದ್ದರೆ, ಶಾಲೆಗೆ ರಜೆ ನೀಡಿ ಸಮುದಾಯ ಭವನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ಇನ್ನು ಸಮುದಾಯ ಭವನ ಆಗಿರುವುದರಿಂದ ಯಾವುದೇ ಕೊಠಡಿಗಳೂ ಇಲ್ಲ. ಒಂದೆಡೆ ಶಿಕ್ಷಕರು, ಮತ್ತೊಂದೆಡೆ ವಿದ್ಯಾರ್ಥಿಗಳು ಕುಳಿತುಕೊಳ್ಳುತ್ತಿದ್ದಾರೆ. ಅಲ್ಲದೆ, ಒಂದೊಂದು ಮೂಲೆಯಲ್ಲಿ ಒಂದೊಂದು ತರಗತಿಗೆ ಪಾಠ ಮಾಡಲಾಗುತ್ತಿದೆ. ಏಳು ತರಗತಿಗಳಿಗೆ ಪಾಠ ಮಾಡುವಷ್ಟು ಜಾಗವೂ ಇಲ್ಲದಾಗಿದೆ ಎಂದು ತಿಳಿದುಬಂದಿದೆ.

ಕೂಡಲೇ ಶಾಲಾ ಕಟ್ಟಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು. ತರಗತಿಗಳಿಗೆ ಅಗತ್ಯವಿರುವಷ್ಟು ಕೊಠಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಮತ್ತು ಪೋಷಕರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X