ಯಾದಗಿರಿ | ಕಾಂಪೌಂಡ್ ಕುಸಿದು 3 ಕಾರು ಜಖಂ; ಸೂಕ್ತ ಪರಿಹಾರಕ್ಕೆ ಆಗ್ರಹ

Date:

ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ನೀರು ಶುದ್ಧಿಕರಣ ಘಟಕದ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂರು ಕಾರುಗಳು ಜಖಂಗೊಂಡಿರುವ ಘಟನೆ ನಡೆದಿದ್ದು, ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

- Advertisement -

ಯಾದಗಿರಿ ನಗರದಲ್ಲಿ ಸೋಮವಾರ ಮದ್ಯಾಹ್ನ ಸುರಿದ ಭಾರೀ ಮಳೆಯಿಂದ ಅನಾಹುತ ಉಂಟಾಗಿದ್ದು, ನಗರದ ಹೊಸಳ್ಳಿ ಕ್ರಾಸ್ ಬಳಿ ಇರುವ ನೀರು ಶುದ್ಧೀಕರಣ ಘಟಕದ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ನ್ಯೂ ಬಾಂಬೆ ಗ್ಯಾರೇಜ್ ಮುಂಭಾಗದಲ್ಲಿ ನಿಲ್ಲಿಸಿದ್ದ ಮೂರು ಕಾರುಗಳು ಜಖಂಗೊಂಡಿವೆ. ಇದಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಂಪೌಂಡ್ ಮೊದಲೇ ಶಿಥಿಲಗೊಂಡಿತ್ತು. ಇದೀಗ ಮಳೆಗೆ ಕಾಂಪೌಂಡ್ ಬಿದ್ದ ಪರಿಣಾಮ ಕಾರುಗಳು
ಜಖಂಗೊಂಡು ಭಾರೀ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತಾ ಕ್ರಮವಹಿಸಿ ದುರಸ್ತಿ ಮಾಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷದಿಂದ ಕಾರುಗಳು ಜಖಂಗೊಂಡಿವೆ” ಎಂದು ಆರೋಪಿಸಿದರು.

“ಮದ್ಯಾಹ್ನ ಊಟದ ಸಮಯಕ್ಕೆ ಮೆಕ್ಯಾನಿಕ್‌ಗಳು ಊಟಕ್ಕೆ ತೆರಳಿದ್ದರಿಂದ ಯಾವುದೇ ಸಾವು ನೋವು ಆಗಿಲ್ಲ. ವಾಹನಗಳಿಗೆ ಮಾತ್ರ ಭಾರೀ ನಷ್ಟವಾಗಿದ್ದು, ಇದನ್ನು ನಗರಸಭೆಯವರೇ ಭರಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮನರೇಗಾ ಕಾರ್ಮಿಕರಿಗೆ ವೇತನ ನೀಡುವಂತೆ ಆಗ್ರಹ

“ನೀರು ಶುದ್ಧೀಕರಣ ಘಟಕದ ಆವರಣಗೋಡೆ ಪೂರ್ತಿ ನೆಲಸಮಗೊಳಿಸಿ ಹೊಸದಾಗಿ ನಿರ್ಮಾಣ ಮಾಡಬೇಕು ವಿದ್ಯುತ್ ಕಂಬಗಳು ಪಕ್ಕದಲ್ಲೇ ಇದ್ದು, ಅವುಗಳ ಮೇಲೆ ಗೋಡೆ ಬಿದ್ದು ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಇದೆಲ್ಲವನ್ನು ಮನಗಂಡು ನಗರಸಭೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಅವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದಲ್ಲಿ ನೀರು ಶುದ್ಧೀಕರಣ ಘಟಕದ ಎದುರಿಗೆ ಇರುವ ರಸ್ತೆ ತಡೆದು ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮೆಕ್ಯಾನಿಕ್ ಸಂಘದ ಅಧ್ಯಕ್ಷ ಶರಣಪ್ಪ ಕೌಳೂರು, ಬಾಂಬೆ ಗ್ಯಾರೇಜ್ ಮಾಲಿಕ ರಸೂಲ್ ಸಾಬ, ಮಹಮ್ಮದ್ ಗೌಸ್, ಆಂಜಿನೇಯ ನಾಯ್ಕೊಡಿ ಬೆಳಗೇರಾ, ಆನಂದ, ಭೀಮಣ್ಣ ವಾಡಿ, ಬನ್ನಪ್ಪ, ಮಹಮ್ಮದ್ ಷಬ್ಬೀರ್, ಖದೀರ್, ಕರೀಮ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...