ಯಾದಗಿರಿ | ಒಳ ಮೀಸಲಾತಿ ಗೊಂದಲ ನಿವಾರಿಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವಂತೆ ಎಐಡಿಎಸ್‌ಒ ಆಗ್ರಹ

Date:

ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಒಳ ಮೀಸಲಾತಿ ಗೊಂದಲವನ್ನು ತಕ್ಷಣ ಪರಿಹರಿಸಿ, ಯಾವುದೇ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯಾದಗಿರಿ ಘಟಕ ಆಗ್ರಹಿಸಿದೆ.

- Advertisement -

ಈ ಸಂಬಂಧ ಮಂಗಳವಾರ ಎಐಡಿವೈಒ ಯಾದಗಿರಿ ಗ್ರೇಡ್-2 ತಹಶೀಲ್ದಾರ್ ರವಿ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಮನವಿ ಸಲ್ಲಿಸಿ ಸಂಘಟನೆ ಮುಖಂಡರು ಮಾತನಾಡಿ, ‘ರಾಜ್ಯದಲ್ಲಿ 43 ಇಲಾಖೆಗಳಲ್ಲೂ ಒಟ್ಟು 2,84,881 ಹುದ್ದೆಗಳು ಹಾಗೂ ಕೇಂದ್ರದಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ ಇರುವುದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು ಸಂಘಟನೆ ತಿಳಿಸಿದೆ. ಕಳೆದ ಕೆಲವು ತಿಂಗಳಿಂದ ರಾಜ್ಯಾದ್ಯಂತ ಯುವಕರು ಹೋರಾಟ ನಡೆಸುತ್ತಿದ್ದರೂ, ಬೆಳಗಾವಿ ಅಧಿವೇಶನದಲ್ಲಿ ನೀಡಿದ ಭರವಸೆ ಬಳಿಕವೂ ನೇಮಕಾತಿ ಪ್ರಕ್ರಿಯೆ ಆರಂಭವಾಗದಿರುವುದು ನಿರಾಶೆ ಉಂಟುಮಾಡಿದೆ’ ಎಂದು ಆರೋಪಿಸಿದೆ.

‘ವಯೋಮಿತಿ ಸಡಿಲಿಕೆ ಘೋಷಿಸಿದರೂ ಅದರ ಪ್ರಯೋಜನ ಸಿಗದೆ, ಒಳ ಮೀಸಲಾತಿ ಗೊಂದಲದ ನೆಪದಲ್ಲಿ ನೇಮಕಾತಿ ವಿಳಂಬಗೊಳಿಸಲಾಗುತ್ತಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಯುವಕರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ’ ಎಂದು ಹೇಳಿದೆ.

1588063

‘ಕಲ್ಯಾಣ ಕರ್ನಾಟಕ ಭಾಗದಲ್ಲಿ 22,000ಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೀತಿಯಡಿ ಹಳ್ಳಿಗಳ ಶಾಲೆಗಳನ್ನು ವಿಲೀನಗೊಳಿಸುವ ಕ್ರಮವು ವಿದ್ಯಾರ್ಥಿಗಳ ಶಿಕ್ಷಣ ಹಕ್ಕಿಗೆ ಧಕ್ಕೆಯುಂಟುಮಾಡಲಿದೆ’ ಎಂದು ಆತಂಕ ವ್ಯಕ್ತಪಡಿಸಿದೆ.

‘ಇನ್ನೊಂದೆಡೆ, ದುಬಾರಿ ಅರ್ಜಿ ಶುಲ್ಕಗಳಿಂದ ನಿರುದ್ಯೋಗಿ ಯುವಕರು ಸಂಕಷ್ಟ ಅನುಭವಿಸುತ್ತಿದ್ದು, ಅರ್ಜಿ ಶುಲ್ಕ ರದ್ದುಪಡಿಸಿ ಪರೀಕ್ಷೆ ಹಾಗೂ ಸಂದರ್ಶನಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಕಕ್ಕೇರಾದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

‘ಪ್ರತಿ ವರ್ಷ ಖಾಲಿಯಾಗುವ ಹುದ್ದೆಗಳ ಭರ್ತಿಗೆ ವಾರ್ಷಿಕ ಕ್ಯಾಲೆಂಡರ್ ಪ್ರಕಟಿಸುವುದು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವಂತೆ’ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್, ಮಂಜುನಾಥ್, ಶರಣಗೌಡ, ಹನುಮಂತ, ರಮೇಶ್, ರೆಡ್ಡಿ, ಪ್ರಕಾಶ್, ಹೊನ್ನಯ್ಯ, ಬೀರಲಿಂಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸೆ.16ರಂದು ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’

ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಸ್ಮರಣಾರ್ಥ ಜೈ ಸೀತಾರಾಮ ರೈತ...

ಯಾದಗಿರಿ | ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ...

ಯಾದಗಿರಿ | ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಹಲ್ಲೆ: 14 ಜನರ ವಿರುದ್ಧ ಪ್ರಕರಣ ದಾಖಲು

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ...