ಯಾದಗಿರಿ | ಕೃಷಿ ಕೂಲಿಕಾರರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹ

Date:

ಕೃಷಿ ಕೂಲಿಕಾರರು ನಿತ್ಯದ ದುಡಿಮೆಯನ್ನೇ ಅವಲಂಬಿಸಿ ಜೀವನ ಸಾಗಿಸಬೇಕು. ಇವರಿಗೆ ಈ ಹಿಂದೆ ಕೃಷಿ ರಂಗದಲ್ಲಿ ಕೆಲಸ ಸಿಗುತ್ತಿತ್ತು. ಇದೀಗ ರೈತರು ಹೆಚ್ಚಾಗಿ ಯಂತ್ರಗಳನ್ನು ಬಳಸುತ್ತಿರುವುದರಿಂದ ಕೃಷಿ ಕೂಲಿಕಾರರಿಗೆ ಮೊದಲಿನಂತೆ ರೈತರ ಹೊಲ ಗದ್ದೆಗಳಲ್ಲಿ ಕೆಲಸ ಸಿಗದಂತಾಗಿದೆ. ಪರಿಣಾಮ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವುದು ಗಣನೀಯವಾಗಿ ಹೆಚ್ಚಾಗಿದೆ ಎಂದು ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾರು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಯಾದಗಿರಿ ಜಿಲ್ಲಾ ಸಮಿತಿ ಕಾರ್ಯಕರ್ತರು ʼಕೂಲಿಕಾರರ ಕೂಲಿಯ ಪ್ರಶ್ನೆ- ಸಮಾವೇಶʼ ಹಮ್ಮಿಕೊಂಡಿದ್ದು, ನಗರದ ಚರಬಸವೇಶ್ವರ ಹನುಮಾನ ದೇವಸ್ಥಾನದ ಬಳಿಯಿಂದ ಮೆರವಣಿಗೆ ಮಾಡುವುದರ ಮೂಲಕ ಆರಂಭಿಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಕೃಷಿ ಕೂಲಿಕಾರರು ಅಸಂಘಟಿತರಾಗಿದ್ದಾರೆ. ಅವರಿಗೆ ಸಾಮೂಹಿಕ ಚೌಕಾಸಿಯ ಮೂಲಕ ತಮ್ಮ ವೇತನ ಸೌಲಭ್ಯಗಳನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇತರ ಅಸಂಘಟಿತ ಕೈಗಾರಿಕೆಗಳ ಕಾರ್ಮಿಕರಂತೆ ಕೃಷಿ ಕೂಲಿಕಾರರ ಕನಿಷ್ಠ ವೇತನವನ್ನು ಸರ್ಕಾರವೇ 5 ವರ್ಷಕ್ಕೊಮ್ಮೆ ಪರಿಷ್ಕರಿಸಿ ಪ್ರಕಟಿಸುತ್ತದೆ. ಆದರೆ, ಹೋರಾಟ ಮಾಡಿ ಒತ್ತಾಯ ಮಾಡಿದರೆ ಮಾತ್ರ ಸರ್ಕಾರ ಕೃಷಿ ಕೂಲಿಕಾರರ ಮೂಲ ವೇತನವನ್ನು ಪರಿಷ್ಕರಿಸುತ್ತದೆ. ಇಲ್ಲದೆ ಇದ್ದರೆ ಗಮನಹರಿಸುವುದೇ ಇಲ್ಲ” ಎಂದು ಆರೋಪಿಸಿದರು.

“ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿರುತ್ತವೆ. ಬೆಲೆ ಏರಿಕೆಗೆ ತಕ್ಕಂತೆ ಕೃಷಿ ಕೂಲಿಕಾರರ ಕೂಲಿ ಹೆಚ್ಚಳ ಆಗುವುದೇ ಇಲ್ಲ. ಪರಿಷ್ಕರಿಸಿದ ಕೂಲಿ ಜಾರಿಯಾಗುವುದಿಲ್ಲ. ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಮಾಡುವ ವ್ಯವಸ್ಥೆ ಇಲ್ಲ. ಇಂದಿಗೂ ಮಹಿಳಾ ಕೃಷಿ ಕೂಲಿಕಾರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿಲ್ಲ. ಮಹಿಳೆಯರಿಗೆ ಹಾಗಾಗಿ ಒಂದು ಮಾನವ ದಿನಕ್ಕೆ ಕನಿಷ್ಠ ಕೂಲಿ ₹600 ನೀಡಬೇಕು” ಎಂದು ಒತ್ತಾಯಿಸಿದರು.

“ಕೃಷಿ ಕೂಲಿಕಾರರಿಗಾಗಿ ಒಂದು ಸಮಗ್ರ ಕಾಯ್ದೆ ಜಾರಿಗೆ ತಂದು ಕನಿಷ್ಠ ವೇತನ ಹಾಗೂ ಇತರ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಬೇಕು. ಕೃಷಿ ಕೂಲಿಕಾರರ ದಿನದ ಕನಿಷ್ಠ ಕೂಲಿಯನ್ನು ₹600ಕ್ಕೆ ಏರಿಸಿ ಪರಿಷ್ಕರಿಸಬೇಕು. 57 ವರ್ಷ ತುಂಬಿದ ಪ್ರತಿಯೊಬ್ಬ ಕೃಷಿ ಕೂಲಿಕಾರನಿಗೆ ₹5000 ಪಿಂಚಣಿ ಸೌಲಭ್ಯ ನೀಡಬೇಕು. ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

“ಕೂಲಿಕಾರರ ಅಪಘಾತ, ಅಕಾಲಿಕ ಮರಣ ಸೇರಿದಂತೆ ಹಲವು ಸಂದರ್ಭಗಳಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಗೊಂಡವರಿಗೆ ಗರಿಷ್ಠ ಪರಿಹಾರ ನೀಡಬೇಕು. ಮಹಿಳಾ ಕೃಷಿ ಕೂಲಿಕಾರರಿಗೆ ಹೆರಿಗೆ ಭತ್ಯೆ ಹಾಗೂ ಹೆರಿಗೆ ರಜೆ ನೀಡಬೇಕು. ಕೃಷಿ ಕೂಲಿಕಾರರಿಗೆ ಸಂಬಳ ಸಹಿತ ವಾರದ ರಜೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ವರ್ಷದಲ್ಲಿ 200 ದಿನಗಳ ಕೆಲಸವನ್ನು ಕಡ್ಡಾಯವಾಗಿ ಒದಗಿಸಬೇಕು. ವಾಸಕ್ಕೆ ಸ್ವಂತ ಮನೆ ಇಲ್ಲದ ಕೂಲಿಕಾರರಿಗೆ ಮನೆಗಳನ್ನು ಒದಗಿಸಿ ದುಬಾರಿ ಮನೆ ಬಾಡಿಗೆ ನೀಡಬೇಕಾಗುವುದನ್ನು ತಪ್ಪಿಸಬೇಕು” ಎಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್, ಜಿಲ್ಲಾ ಕಾರ್ಯದರ್ಶಿ ಅಯ್ಯಪ್ಪ ಅನ್ನೂರ, ಜಿಲ್ಲಾ ಸಮಿತಿ ಉಪಾಧ್ಯಕ್ಷರುಗಳಾದ ಶರಣಬಸವ ಜಂಬಲದಿನ್ನಿ, ಹಣಮಂತ ಗೋನಾಲ್, ಮಮತಾಜ್ ಬೇಗಂ, ರಂಗಮ್ಮ ಕಟ್ಟಿಮನಿ, ಬಾಬು ಗುಂಡಳ್ಳಿ, ಸಾಯಬಣ್ಣ ತಂಗಡಗಿ, ಜಿಲ್ಲಾ ಸಮಿತಿ ಸಹ ಕಾರ್ಯದರ್ಶಿಗಳಾದ ನಿಂಗಪ್ಪ ಕುರಕುಂದಿ, ಪ್ರಕಾಶ ಆಲ್ದಾಳ್, ಸಿದ್ದಯ್ಯ ಬೀರಗೊಂಡ, ಶಿವಪ್ಪ ಬಜಂತ್ರಿ ಜುಬೇರ ಪಾಷ, ಸಿದ್ದಮ್ಮ ಬಜಂತ್ರಿ, ಮಹಾದೇವಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | “ಬಸವಾದಿ ಶರಣೆಯರ ವಚನಗಳಲ್ಲಿ ಜೀವಪರ ಚಿಂತನೆ” ವಿಶೇಷ ಉಪನ್ಯಾಸ ಕಾರ್ಯಕ್ರಮ

ಶ್ರಾವಣ ಮಾಸದ ಸಂದರ್ಭದಲ್ಲಿ ಬಸವಾದಿ ಶರಣರು ಹಾಗೂ ಶರಣೆಯರ ಚಿಂತನೆಗಳನ್ನು ಇಂದಿನ...

ಯಾದಗಿರಿ | ನವಿಲು ಬೇಟೆ ಆರೋಪ: ಏಳು ಮಂದಿ ಬಂಧನ; 6 ನಾಡ ಬಂದೂಕು, 12 ಆಮೆ ಸೇರಿ ಸಾಮಗ್ರಿ ವಶ

ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ಸಮೀಪ ನವಿಲುಗಳನ್ನು ಬೇಟೆಯಾಡಿದ ಆರೋಪದಡಿ ಏಳು ಮಂದಿಯನ್ನು...

ಯಾದಗಿರಿ | ವಂದೇ ಭಾರತ ಸ್ಲೀಪರ್ ರೈಲು ಯಾದಗಿರಿ ಮಾರ್ಗವಾಗಿ ಚಲಿಸುವಂತೆ ಆಗ್ರಹಿಸಿ ಕರವೇ ಮನವಿ

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ಸ್ಲೀಪರ್ ರೈಲಿನ ಸಂಚಾರವನ್ನು...

ಯಾದಗಿರಿ | ರೈತರ ಕಲ್ಯಾಣಕ್ಕಾಗಿ ಸೆ.11ರಂದು ಪಾದಯಾತ್ರೆ

ಶ್ರಾವಣ ಮಾಸದ ಬೆನಕನ ಅಮಾವಾಸ್ಯೆ ಅಂಗವಾಗಿ ರೈತರ ಕಲ್ಯಾಣಕ್ಕಾಗಿ ಡಾ. ಭೀಮಣ್ಣ...