ಯಾದಗಿರಿ | ಹತ್ತಿಕುಣಿ ಹೊರವಲಯದಲ್ಲಿ ಚಿರತೆ ದಾಳಿ: ಹಸು ಬಲಿ, ಕರುಗೆ ಗಾಯ

Date:

ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.

- Advertisement -

ಮುರಘೇಂದ್ರ ತಂ ನರಸಪ್ಪ ಅಲ್ಲೂರ ಅವರ ಸರ್ವೆ ನಂ.224ರ ಜಮೀನಿನ ಶೆಡ್‌ನಲ್ಲಿ ಕಟ್ಟಿದ್ದ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಹಸು ಸಾವನ್ನಪ್ಪಿದ್ದು, ಕರು ಗಾಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಮಾಹಿತಿ ತಿಳಿದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುನ್ನಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅರಣ್ಯ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ನಡೆಸಿ ಗಾಯಗೊಂಡ ಕರುವಿಗೆ ಚಿಕಿತ್ಸೆ ನೀಡಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಜಿಲ್ಲೆಯಲ್ಲಿ ಇತ್ತೀಚೆಗೆ ಹಲವು ಗ್ರಾಮಗಳಲ್ಲಿ ಚಿರತೆ ದಾಳಿಗಳು ನಡೆಯುತ್ತಿರುವ ಹಿನ್ನೆಲೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯಲು ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಹಸುವಿನ ಮಾಲೀಕರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | “ಬಸವಾದಿ ಶರಣೆಯರ ವಚನಗಳಲ್ಲಿ ಜೀವಪರ ಚಿಂತನೆ” ವಿಶೇಷ ಉಪನ್ಯಾಸ ಕಾರ್ಯಕ್ರಮ

ಶ್ರಾವಣ ಮಾಸದ ಸಂದರ್ಭದಲ್ಲಿ ಬಸವಾದಿ ಶರಣರು ಹಾಗೂ ಶರಣೆಯರ ಚಿಂತನೆಗಳನ್ನು ಇಂದಿನ...

ಯಾದಗಿರಿ | ನವಿಲು ಬೇಟೆ ಆರೋಪ: ಏಳು ಮಂದಿ ಬಂಧನ; 6 ನಾಡ ಬಂದೂಕು, 12 ಆಮೆ ಸೇರಿ ಸಾಮಗ್ರಿ ವಶ

ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ಸಮೀಪ ನವಿಲುಗಳನ್ನು ಬೇಟೆಯಾಡಿದ ಆರೋಪದಡಿ ಏಳು ಮಂದಿಯನ್ನು...

ಯಾದಗಿರಿ | ವಂದೇ ಭಾರತ ಸ್ಲೀಪರ್ ರೈಲು ಯಾದಗಿರಿ ಮಾರ್ಗವಾಗಿ ಚಲಿಸುವಂತೆ ಆಗ್ರಹಿಸಿ ಕರವೇ ಮನವಿ

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ಸ್ಲೀಪರ್ ರೈಲಿನ ಸಂಚಾರವನ್ನು...

ಯಾದಗಿರಿ | ರೈತರ ಕಲ್ಯಾಣಕ್ಕಾಗಿ ಸೆ.11ರಂದು ಪಾದಯಾತ್ರೆ

ಶ್ರಾವಣ ಮಾಸದ ಬೆನಕನ ಅಮಾವಾಸ್ಯೆ ಅಂಗವಾಗಿ ರೈತರ ಕಲ್ಯಾಣಕ್ಕಾಗಿ ಡಾ. ಭೀಮಣ್ಣ...