ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

Date:

ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಸೋಮವಾರ ಬೆಳಿಗ್ಗೆ ಸುರಪುರ ತಾಲೂಕಿನ ದೇವಪುರ ಕ್ರಾಸ್‌ನಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ, ನಾರಾಯಣಪುರ ಕೃಭಾಜನಿನಿ ಮುಖ್ಯ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಮನವಿ ಪತ್ರ ಸಲ್ಲಿಸಿ ಪ್ರತಿಭಟನಾಕಾರರು ಮಾತನಾಡಿ, ‘ರೈತರು ನೀರಾವರಿಯನ್ನು ಅವಲಂಬಿಸಿ ಶೇಂಗಾ, ಸಜ್ಜೆ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದು, ಈ ಬೆಳೆಗಳು ಈಗ ಕಾಳು ಕಟ್ಟುವ ಹಂತದಲ್ಲಿವೆ. ಏಪ್ರಿಲ್ 15ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಿದರೆ ಮಾತ್ರ ರೈತರ ಬೆಳೆ ಕೈಗೆ ಸಿಗಲಿದೆ. ಇಲ್ಲವಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ’ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

‘ಬೇಸಿಗೆ ಬೆಳೆಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿ ನಡೆಸಿದ ಸಲಹಾ ಸಮಿತಿಯ ಸಭೆಯಲ್ಲಿ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ’ ಎಂದು ಸಂಘಟನೆ ಆರೋಪಿಸಿದೆ.

‘ಕಳೆದ ಎರಡು, ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಕೀಟನಾಶಕ ಮತ್ತು ಕೂಲಿ ವೆಚ್ಚಗಳು ಹೆಚ್ಚಾಗಿರುವ ಸಂದರ್ಭದಲ್ಲಿ ಇಂತಹ ನಿರ್ಧಾರ ರೈತರಿಗೆ ಮತ್ತಷ್ಟು ಸಂಕಷ್ಟ ಉಂಟುಮಾಡಲಿದೆ’ ಎಂದು ಹೇಳಿದರು.

‘ಆದ್ದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ರೈತರ ಬೇಡಿಕೆಗೆ ಸ್ಪಂದಿಸಿ ಏಪ್ರಿಲ್ 15ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡುವ ಮೂಲಕ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಈ ಸಂದರ್ಭದಲ್ಲಿ ವೆಂಕಟೇಶಗೌಡ ಕುಪಗಲ್, ಹಣಮಂತ್ರಾಯ ಚಂದಲಾಪೂರ, ಅಯ್ಯಣ್ಣ ಹಾಲಭಾವಿ, ಮಹಾದೇವಮ್ಮ ಬೇವಿನಾಳಮಠ, ಮರಿಯಪ್ಪ ಮಾಸ್ಟರ ಹೇಮನೂರು, ತಿಪ್ಪಣ್ಣ ಜಂಪಾ, ತಿರುಪತಿ ಕುಪಗಲ್, ಹನುಮಗೌಡ ನಾರಾಯಣಪೂರ, ಅವಿನಾಶ ಕೊಡೇಕಲ್, ಮಲ್ಲಣ್ಣ ಹಾಲಭಾವಿ, ಸಾಹೇಬಗೌಡ ಮದಲಿಂಗನಾಳ, ಗದ್ದೆಪ್ಪ ನಾಗಬೇವಿನಾಳ, ಭೀಮಣ್ಣ ತಿಪ್ಪನಟಗಿ, ನಾಗಪ್ಪ ಕುಪಗಲ್, ಭೀಮನಗೌಡ ಕರ್ನಾಳ, ರಾಗು ಕುಪ್ಪಗಲ್, ಶಿವನಗೌಡ ರುಕ್ಕಾಪೂರ, ಪ್ರಭು ದೊರಿ, ದೇವಿಂದ್ರಪ್ಪ ತಿಪ್ಪನಟಗಿ, ರೋನರೀಸ್ ರೋಸ್ಟ್, ತಿಪ್ಪಣ್ಣ ತಳವಾರ, ಭೀಮರಾಯ ಒಕ್ಕಲಿಗ, ಯಂಕೋಬ ದೊರೆ ಕುಪಗಲ್, ಲೋಹಿತ್ ಕುಮಾರ, ಭೀಮನಗೌಡ ಸೂಗೂರು, ಮಾನಪ್ಪ ಕೊಂಬಿನ್, ಹಣಮಂತ ಕುಂಬಾರಪೇಟೆ, ಶಿವಲಿಂಗಪ್ಪ ಕುಂಬಾರಪೇಟೆ, ಚಂದ್ರಶೇಖರ ಗುಳಬಾಳ, ಕಾಮರಾಯ ಮದಲಿಂಗನಾಳ, ಶಂಕ್ರಪ್ಪ ಗುಳಬಾಳ, ಮಲ್ಲಣ್ಣ ಗುಳಬಾಳ, ಹೆಚ್ ಆರ್ ಬಡಿಗೇರ, ದೇವಪ್ಪ ಯರಕಿಹಾಳ, ದೇವಿಂದ್ರಪ್ಪ ಬಳಿಚಕ್ರ, ಸಂಜೀವ ಗುಳಬಾಳ, ಶ್ರವಣಕುಮಾರ ಡೊಣ್ಣಿಗೇರಿ, ಹಣಮಂತ್ರಾಯಗೌಡ ಕರ್ನಾಳ ಇನ್ನಿತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | “ಬಸವಾದಿ ಶರಣೆಯರ ವಚನಗಳಲ್ಲಿ ಜೀವಪರ ಚಿಂತನೆ” ವಿಶೇಷ ಉಪನ್ಯಾಸ ಕಾರ್ಯಕ್ರಮ

ಶ್ರಾವಣ ಮಾಸದ ಸಂದರ್ಭದಲ್ಲಿ ಬಸವಾದಿ ಶರಣರು ಹಾಗೂ ಶರಣೆಯರ ಚಿಂತನೆಗಳನ್ನು ಇಂದಿನ...

ಯಾದಗಿರಿ | ನವಿಲು ಬೇಟೆ ಆರೋಪ: ಏಳು ಮಂದಿ ಬಂಧನ; 6 ನಾಡ ಬಂದೂಕು, 12 ಆಮೆ ಸೇರಿ ಸಾಮಗ್ರಿ ವಶ

ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ಸಮೀಪ ನವಿಲುಗಳನ್ನು ಬೇಟೆಯಾಡಿದ ಆರೋಪದಡಿ ಏಳು ಮಂದಿಯನ್ನು...

ಯಾದಗಿರಿ | ವಂದೇ ಭಾರತ ಸ್ಲೀಪರ್ ರೈಲು ಯಾದಗಿರಿ ಮಾರ್ಗವಾಗಿ ಚಲಿಸುವಂತೆ ಆಗ್ರಹಿಸಿ ಕರವೇ ಮನವಿ

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ಸ್ಲೀಪರ್ ರೈಲಿನ ಸಂಚಾರವನ್ನು...

ಯಾದಗಿರಿ | ರೈತರ ಕಲ್ಯಾಣಕ್ಕಾಗಿ ಸೆ.11ರಂದು ಪಾದಯಾತ್ರೆ

ಶ್ರಾವಣ ಮಾಸದ ಬೆನಕನ ಅಮಾವಾಸ್ಯೆ ಅಂಗವಾಗಿ ರೈತರ ಕಲ್ಯಾಣಕ್ಕಾಗಿ ಡಾ. ಭೀಮಣ್ಣ...