ವಿಜಯಪುರ | ಎಕ್ಸಿಬಿಷನ್‌ನಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು; ಐವರ ಬಂಧನ

Date:

Advertisements

ವಿಜಯಪುರದಲ್ಲಿ ದಸರಾ ಹಬ್ಬದ ಪ್ರಯುಕ್ತ ಎಕ್ಸಿಬಿಷನ್ ನಡೆಸಲಾಗುತ್ತಿದೆ. ಎಕ್ಸಿಬಿಷನ್‌ನಲ್ಲಿ ಆಟವಾಡಲು ತೆರಳಿದ್ದ ಯುವತಿಯೊಬ್ಬರು ರೇಂಜರ್ ಸ್ವಿಂಗ್‌ನಿಂದ ಬಿದ್ದ ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಪ್ರಕರಣದಲ್ಲಿ ಎಕ್ಸಿಬಿಷನ್‌ ನಡೆಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರದ ಫಿಶ್ ಟನಲ್ ಎಕ್ಪೋದಲ್ಲಿ ಎಕ್ಸಿಬಿಷನ್ ನಡೆಯುತ್ತಿದೆ. 21 ವರ್ಷದ ನಿಖಿತಾ ಬಿರಾದರ್ ತಮ್ಮ ಕುಟುಂಬದೊಂದಿಗೆ ಎಕ್ಸಿಬಿಷನ್ ನೋಡಲು ತೆರಳಿದ್ದವು. ಈ ವೇಳೆ, ನಿಖಿತಾ ಮತ್ತು ಆಕೆಯ ಸ್ನೇಹಿತೆ ತಲೆ ಕೆಳಗಾಗಿ ತಿರುಗಿಸುವ ರೇಂಜರ್ ಸ್ವಿಂಗ್‌ನಲ್ಲಿ ಆಟವಾಡಲು ಹೋಗಿದ್ದರು. ರೇಂಜರ್ ಸ್ಟಿಂಗ್ ತಿರುಗಲು ಆರಂಭಿಸುತ್ತಿದ್ದಂತೆ ನಿಖಿತಾ ಸೇರಿ ಹಲವರು ಕಿರುಚಾಡಿದ್ದಾರೆ. ಮಿಷನ್‌ಅನ್ನು ನಿಲ್ಲಿಸುವಂತೆ ಕೂಗಿಕೊಂಡಿದ್ದಾರೆ.

ಆದರೂ, ರೇಂಜರ್ ಸ್ವಿಂಗ್ ಆಪರೇಟರ್‌ಗಳು ಅವರ ಮಾತನ್ನು ನಿರ್ಲಕ್ಷಿಸಿದ್ದಾರೆ. ಆದೇ ಸಮಯದಲ್ಲಿ, ನಿಖಿತಾಗೆ ಹಾಕಲಾಗಿದ್ದ ಸೇಫ್ಟಿ ಬೆಲ್ಟ್‌ ಸಡಿಲಗೊಂಡು, ಕಳಚಿಕೊಂಡಿದೆ. ಪರಿಣಾಮ ಆಕೆ ಸ್ವಿಂಗ್‌ನಿಂದ ಕೆಳಗೆ ಬಿದ್ದಿದ್ದು, ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

Advertisements

ದುರ್ಘಟನೆಗೆ ಫೀಶ್ ಟನಲ್ ಎಕ್ಪೋ ಮ್ಯಾನೇಜ್ಮೆಂಟ್‌ನ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಕ್ಸ್ಪೋ ಮ್ಯಾನೇಜರ್, ಆಪರೇಟರ್, ಕ್ಯಾಷಿಯರ್ ಸೇರಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X