ಕೊಳ್ಳೆಗಾಲ | ಆನ್ಲೈನ್ ಸಾಲದ ಆಪ್ ನಿಂದ ವಂಚನೆ; ಯುವಕನ ಅಸಹಜ ಸಾವು

Date:

Advertisements

ಚಾಮರಾಜನಗರ ಜಿಲ್ಲೆ, ಕೊಳ್ಳೆಗಾಲ ತಾಲ್ಲೂಕು ಕೊಂಗನಹಳ್ಳಿ ಗ್ರಾಮದ ಯುವಕ ರಾಜಪ್ಪ (30) ಆನ್ಲೈನ್ ಸಾಲದ ಆಪ್ ನಿಂದ ವಂಚನೆಗೊಳಗಾಗಿ ಮಾನಕ್ಕೆ ಅಂಜಿ ಅಸಹಜ ಸಾವಿಗೀಡಾಗಿರುವ ಪ್ರಕರಣ ವರದಿಯಾಗಿದೆ.

ಆನ್ಲೈನ್ ಸಾಲದ ಆಪ್ 10 ರಿಂದ 15 ಲಕ್ಷ ಸಾಲ ನೀಡುವ ಭರವಸೆ ನಂಬಿ, ಯುವಕ ರಾಜಪ್ಪ ಆನ್ಲೈನ್ ಮೂಲಕ ₹2,50,000 ರೂಪಾಯಿ ಪಾವತಿ ಮಾಡಿದ್ದಾರೆ. ಇಂಜಿನಿಯರ್ ವಿದ್ಯಾರ್ಥಿಯಾಗಿದ್ದು, ಸಾಲ ಸಿಗುವ ಭರವಸೆ ನಂಬಿ ಹಣ ಪಾವತಿ ಮಾಡಿ ಮೋಸ ಹೋಗಿರುವುದು ಮನದಟ್ಟಾದ ಬಳಿಕ ಮಾನಕ್ಕೆ, ಮನೆಯವರಿಗೆ ಅಂಜಿ ಅಸಹಜ ಸಾವಿಗೆ ಶರಣಾಗಿರುವುದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಗುಂಡ್ಲುಪೇಟೆ | ಹುಲಿ ಪತ್ತೆಗೆ ಬೋನಿಟ್ಟ ಅರಣ್ಯ ಇಲಾಖೆ; ಸಿಬ್ಬಂದಿಯನ್ನೇ ಕೂಡಿಟ್ಟ ಗ್ರಾಮಸ್ಥರು

ವಿಷಯ ತಿಳಿದ ಪೋಷಕರು ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುಪ್ರೀತ್ ರವರು ಸಿಬ್ಬಂದಿಗಳೊಡನೆ ಆಸ್ಪತ್ರೆಗೆ ಭೇಟಿ ನೀಡಿ ದೇಹ ಪರಿಶೀಲನೆ ನಡೆಸಿ, ಸದರಿ ಪ್ರಕಾರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X