ಗುಂಡ್ಲುಪೇಟೆ | ಕ್ವಾರೆಯಲ್ಲಿ ಈಜಲು ತೆರಳಿ ಯುವಕ ಸಾವು: ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಶಶಾಂಕ್ ಬಿನ್ ಮಹೇಶ್ ಕುಮಾರ್ (17) ಎಂಬ ಯುವಕ ಮಡಹಳ್ಳಿ ಗುಡ್ಡದ ಬಳಿಯ ಸ್ಥಗಿತಗೊಂಡ ಕ್ವಾರೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ಸಾವಿಗೀಡಾದ ದುರ್ಘಟನೆ ನಡೆದಿದೆ.

- Advertisement -

ಮೃತ ಯುವಕ ಗುಂಡ್ಲುಪೇಟೆ ಪಟ್ಟಣದ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಬೇಸಿಗೆಯ ಬಿಸಿಲಿನ ತಾಪ ತಣಿಸಿಕೊಳ್ಳಲು ಸ್ನೇಹಿತರೊಂದಿಗೆ ಕ್ವಾರೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಪ್ರತಿ ವರ್ಷವೂ ಬೇಸಿಗೆ ಸಮಯದಲ್ಲಿ ಮಕ್ಕಳು ಹಾಗೂ ಯುವಕರು ನೀರಿನ ತಾಣಗಳಿಗೆ ತೆರಳಿ ಈಜಲು ಪ್ರಯತ್ನಿಸಿ ಪ್ರಾಣ ಕಳೆದುಕೊಳ್ಳುವ ಘಟನೆಗಳು ಮರುಕಳಿಸುತ್ತಿದ್ದರೂ, ಸಂಬಂಧಿತ ಆಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಡ್ಲುಪೇಟೆಯ ಪೂರ್ವ ಭಾಗದಲ್ಲಿರುವ ಗುಂಕಲ್ಲು ಗುಡ್ಡವನ್ನು ಅಗೆದು ತೋಡಿರುವ ಆಳವಾದ ಗಣಿಯಲ್ಲಿ ನೀರು ತುಂಬಿಕೊಂಡಿದ್ದು, ಇದೇ ಸ್ಥಳದಲ್ಲಿ ಯುವಕ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಈ ಹಿಂದೆ ಇದೇ ಗಣಿಯಲ್ಲಿ ಕುಸಿತ ಸಂಭವಿಸಿ ಹತ್ತಾರು ಜನರು ಸಾವನ್ನಪ್ಪಿದ್ದ ಘಟನೆ ಜನರ ನೆನಪಿನಲ್ಲಿ ಇನ್ನೂ ಹಸಿರಾಗಿಯೇ ಇದೆ. ಆದರೂ ಈ ಪ್ರದೇಶದಲ್ಲಿ ಯಾವುದೇ ಭದ್ರತಾ ವ್ಯವಸ್ಥೆ ಇಲ್ಲದೇ, ನಿರ್ಬಂಧಗಳಿಲ್ಲದೇ ಜನರು ತೆರಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಕಸಾಪ ಅಧ್ಯಕ್ಷ ಶೈಲಕುಮಾರ್ ಪ್ರತಿಕ್ರಿಯಿಸಿ, ಇಂತಹ ಅಪಾಯಕಾರಿ ಸ್ಥಳಗಳಿಗೆ ಬೇಲಿ ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ತಡೆಹಿಡಿಯಬೇಕು. ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಉರಿಬಿಸಿಲಿಗೆ ತತ್ತರ: 39° ತಾಪಮಾನ ದಾಖಲು, ಜನಜೀವನ ಅಸ್ತವ್ಯಸ್ತ

ಯುವ ಮುಖಂಡ ಎಚ್.ಎಂ. ನಂದೀಶ್ ಮಾತನಾಡಿ, ಸ್ಥಗಿತಗೊಂಡ ಕ್ವಾರೆಯಲ್ಲಿ ನೀರು ಸಂಗ್ರಹವಾಗಿರುವುದು ದೊಡ್ಡ ಅಪಾಯವಾಗಿದೆ. ಬೇಸಿಗೆಯಲ್ಲಿ ಬಾಲಕರು ಮತ್ತು ಯುವಕರು ಈಜಲು ಹೋಗಿ ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪ್ರದೇಶಗಳಲ್ಲಿ ಯಾರೂ ಪ್ರವೇಶಿಸದಂತೆ ಬೇಲಿ ಹಾಕಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ಘಟನೆಗಳಿಗೆ ತಾಲ್ಲೂಕು ಆಡಳಿತ ಮತ್ತು ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹೊಣೆಗಾರರಾಗಬೇಕು ಎಂದು ಆಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ತಂಬಾಕು ದರ ಕುಸಿತ, ಬೆಳೆ ಮಿತಿ ಹೇರಿಕೆ: ಮೈಸೂರು ಜಿಲ್ಲೆಯ ರೈತರು ಸಂಕಷ್ಟದಲ್ಲಿ

ಈ ಘಟನೆ ಸ್ಥಳೀಯರಲ್ಲಿ ದುಃಖ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...