ಬಾಗೇಪಲ್ಲಿ | ಕ್ರೀಡಾ ಚಟುವಟಿಕೆಗಳ ಮೂಲಕ ಒತ್ತಡ ಮುಕ್ತರಾಗಿ : ಆನಂದ್‌ ರೆಡ್ಡಿ

Date:

Advertisements

ಇಂದಿನ ಯುವ ಪೀಳಿಗೆ ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಒತ್ತಡದಿಂದ ಹೊರ ಬರಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುಟ್ಟಿ ಎಂದು ಸಮಾಜ ಸೇವಕ ಆನಂದರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಗೇಪಲ್ಲಿ ತಾಲೂಕಿನ ಪೆನಮಲೆ ಗ್ರಾಮದಲ್ಲಿ ದಸರಾ ಹಬ್ಬದ ಪ್ರಯುಕ್ತ ಪೆನಮಲೆ ಭಜರಂಗಿ ಸೇವಾ ಟ್ರಸ್ಟ್ ವತಿಯಿಂದ ಅಯೋಜಿಸಿದ್ದ ಎರಡು ದಿನಗಳ ದಸರಾ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಹಲವು ದಶಕಗಳ ಹಿಂದೆ ನಗರ ಮತ್ತು ಪಟ್ಟಣ ಪ್ರದೇಶದ ನಾಗರೀಕರಿಗೆ ಮಾತ್ರ ಸೀಮಿತವಾಗಿದ್ದ ಮೊಬೈಲ್ ಬಳಕೆ ಹಾಗೂ ಇಂಟರ್‌ನೆಟ್ ಗೇಮ್‌ಗಳು, ಇತ್ತಿಚೀನ ದಿನಗಳಲ್ಲಿ ಗ್ರಾಮೀಣ ಪ್ರದೇಶಕ್ಕೂ ಲಗ್ಗೆ ಇಟ್ಟಿವೆ. ಮೊಬೈಲ್ ಇಂಟರ್‌ನೆಟ್ ಬಳಕೆಯನ್ನು ಒಳ್ಳೆಯದಕ್ಕಿಂತ ಕೆಟ್ಟದ್ದಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳುವ ವಾತವರಣ ಇಂದಿನ ಸಮಾಜದಲ್ಲಿ ನಿರ್ಮಾಣವಾಗಿದ್ದು ಯುವ ಪೀಳಿಗೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ದಿನಚರಿ ಹವ್ಯಾಸಗಳನ್ನು ಬದಲಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

Advertisements

ಮನುಷ್ಯ ದೇಹಕ್ಕೆ ಆರೋಗ್ಯ ನೀಡುವ ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಖೋ ಖೋ ಮುಂತಾದ ಕ್ರೀಡೆಗಳನ್ನು ಮೂಲೆ ಗುಂಪು ಮಾಡುವ ಮಟ್ಟಕ್ಕೆ ಇಂಟರ್ ನೆಟ್ ಗೇಮ್‌ಗಳು ಬೆಳೆದು ನಿಂತಿವೆ. ಇದರಿಂದ ಮನುಷ್ಯನ ದೇಹಕ್ಕೆ ವ್ಯಾಯಾಮ ಇಲ್ಲದಂತಾಗಿ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಕ್ರೀಡೆ ಮತ್ತು ಕಲೆಗೆ ಮಹತ್ವ ಕೊಟ್ಟು ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯದ ಜೊತೆಗೆ ದೇಹವೂ ಬಲಿಷ್ಠಗೊಳ್ಳುತ್ತದೆ ಎಂದರು.

ಬಾಗೇಪಲ್ಲಿ ತಾಲೂಕಿನ ಪೆನಮಲೆ ಗ್ರಾಮದಲ್ಲಿ ನಡೆದ ದಸರಾ ಗ್ರಾಮೀಣ ಕ್ರೀಡಾ ಕೂಟದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ 15 ತಂಡಗಳು ಭಗವಹಿಸಿದ್ದು, ಪೆನಮಲೆ ಲೆಜೆಂಡ್ಸ್ ತಂಡ ಪ್ರಥಮ ಸ್ಥಾನ ಪಡೆದು ಪಂದ್ಯಾವಳಿಯಲ್ಲಿ ಜಯಭೇರಿ ಸಾಧಿಸಿದರೆ, ಬಾಲರೆಡ್ಡಿಪಲ್ಲಿ ಗ್ರಾಮದ ಚೌಡೇಶ್ವರಿ ಯುವಕರ ಬಳಗ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸತ್ಯನಾರಾಯಣರೆಡ್ಡಿ, ಮುಖಂಡರಾದ ರಾಜೇಂದ್ರ, ನವೀನ್, ಹರೀಶ್, ರಾಜಾರೆಡ್ಡಿ, ಮಹೇಂಧ್ರ, ಶ್ರೀನಿವಾಸ್, ಶ್ರೀಧರ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X