ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

Date:

Advertisements

ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲಾಗಿದೆ.

ಬಾಬಾ ರಾಮ್‌ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾನುವಾರ ಬಂಧನ ವಾರೆಂಟ್ ಜಾರಿ ಮಾಡಿದೆ.

ಪತಂಜಲಿ ಆಯುರ್ವೇದ ಉತ್ಪನ್ನಗಳ ಭಾಗವಾಗಿರುವ ದಿವ್ಯಾ ಫಾರ್ಮಸಿ ವಿರುದ್ಧ ಔಷಧ ಇನ್‌ಸ್ಪೆಕ್ಟರ್‌ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ದಿವ್ಯಾ ಫಾರ್ಮಿಸಿಯ ಉತ್ಪನ್ನಗಳ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಾರೆ ಎಂದು ರಾಮ್‌ದೇವ್ ಮತ್ತು ಬಾಲಕೃಷ್ಣರನ್ನು ಆರೋಪಿಗಳನ್ನಾಗಿ ಹೆಸರಿಸಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ...

ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ...

Download Eedina App Android / iOS

X