ಲೋಕಸಭೆ ಚುನಾವಣೆ| ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಅಪ್ಲಿಕೇಶನ್ ಬಿಡುಗಡೆ

Date:

Advertisements

ರಾಷ್ಟ್ರ ರಾಜಧಾನಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ನಿಮ್ಮ ಕ್ಷೇತ್ರದ ಅಭ್ಯರ್ಥಿಯ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಸಹಾಯ ಮಾಡುವ ಕೆವೈಸಿ (Know About Candidates-KYC) ಅಪ್ಲಿಕೇಶನ್ ಬಿಡುಗಡೆ ಮಾಡಿದೆ.

“ಜನರು ತಮ್ಮ ಕ್ಷೇತ್ರದ ಯಾವುದೇ ಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಈ ಅಪ್ಲಿಕೇಶನ್ ಮೂಲಕ ತಿಳಿಯಬಹುದಾಗಿದೆ. ಆ್ಯಂಡ್ರಾಯ್ಡ್ ಮತ್ತು ಐಒಎಸ್ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬಹುದು” ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆ | ಮೂರು ರಾಜ್ಯಗಳಲ್ಲಿ ಏಳು ಹಂತದ ಮತದಾನ: ಎಷ್ಟು ರಾಜ್ಯಗಳಲ್ಲಿ ಒಂದೇ ಹಂತ?

Advertisements

ಹೊಸ ಮೊಬೈಲ್ ಅಪ್ಲಿಕೇಶನ್ ಬಗ್ಗೆ ಅಧಿಕ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತರು, “ನಾವು ಹೊಸ ಮೊಬೈಲ್ ಅಪ್ಲಿಕೇಶನ್‌ ಅನ್ನು ಆರಂಭಿಸಿದ್ದೇವೆ. ಇದು ಲೋಕಸಭೆಯಲ್ಲಿ ತಮ್ಮ ಕ್ಷೇತ್ರದಿಂದ ಕಣಕ್ಕಿಳಿಯುವ ಅಭ್ಯರ್ಥಿಯು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆಯೇ ಎಂದು ತಿಳಿಯಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅನ್ನು ‘ನೋ ಯುವರ್ ಕ್ಯಾಂಡಿಡೇಟ್’ ಅಥವಾ ‘ಕೆವೈಸಿ’ ಎಂದು ಕರೆಯಲಾಗುತ್ತದೆ” ಎಂದು ತಿಳಿಸಿದರು.

ಕೆವೈಸಿ ಅಪ್ಲಿಕೇಶನ್‌ನ ಅಧಿಕ ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತರು, “ಮತದಾರರು ತಮ್ಮ ಕ್ಷೇತ್ರಗಳ ಅಭ್ಯರ್ಥಿಗಳ ಅಪರಾಧ ದಾಖಲೆಗಳು, ಅವರ ಆಸ್ತಿ ಮತ್ತು ಸಾಲದ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳ ಬಳಿ ಇರುವ ಆಸ್ತಿ ಮತ್ತು ಸಾಲದ ಮಾಹಿತಿಯನ್ನು ಮತದಾರರು ಈಗ ಸ್ವತಃ ಪರಿಶೀಲಿಸಬಹುದು. ಈ ಮಾಹಿತಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ” ಎಂದು ಹೇಳಿದರು.

ಅಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಕ್ಷಗಳು ಈ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ವಿವರಿಸಬೇಕಾಗುತ್ತದೆ. ಜೊತೆಗೆ ಕ್ರಿಮಿನಲ್ ಹಿನ್ನೆಲೆ ಇರುವ ನಾಮಿನಿಗಳು ಕೂಡಾ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ತಿಳಿಸಿದರು. “ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮೂರು ಬಾರಿ ದೂರದರ್ಶನದಲ್ಲಿ ಪತ್ರಿಕೆಗಳಲ್ಲಿ ಪ್ರಕಟಿಸಬೇಕು ಅಥವಾ ಸಾರ್ವಜನಿಕಗೊಳಿಸಬೇಕು” ಎಂದು ಚುನಾವಣಾ ಸಮಿತಿಯ ಮುಖ್ಯಸ್ಥರು ತಿಳಿಸಿದರು.

ಕೆವೈಸಿ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್ ಎರಡರಲ್ಲೂ ಲಭ್ಯವಿದೆ. ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಕ್ಯೂಆರ್ ಕೋಡ್ ಅನ್ನು ಸಹ ಹಂಚಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ, ಆಯೋಗವು ಲೋಕಸಭೆ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ. ಆದರೆ ಆಂಧ್ರಪ್ರದೇಶ, ಒಡಿಶಾ, ಅರುಣಾಚಲ ಮತ್ತು ಸಿಕ್ಕಿಂ ನಾಲ್ಕು ರಾಜ್ಯಗಳಿಗೆ ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ಪ್ರತ್ಯೇಕ ಏಕ ಹಂತಗಳಲ್ಲಿ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X