ಪ್ರಣಾಳಿಕೆ ಬಿಡುಗಡೆಗೊಳಿಸಿದ ಡಿಎಂಕೆ | ₹75ಕ್ಕೆ ಪೆಟ್ರೋಲ್, ₹500ಕ್ಕೆ ಸಿಲಿಂಡರ್; ರಾಜ್ಯಪಾಲರ ಹಸ್ತಕ್ಷೇಪಕ್ಕೆ ಬ್ರೇಕ್

Date:

Advertisements

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಹಾಗೂ ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ದ್ರಾವಿಡ ಮುನ್ನೇತ್ರ ಕಝಗಂ(ಡಿಎಂಕೆ) ಪಕ್ಷ ತನ್ನ ಚುನಾವಣಾ ಪ್ರಣಾಳಿಕೆ ಹಾಗೂ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ್ದು, ಭರಪೂರ ಭರವಸೆಗಳನ್ನು ಘೋಷಿಸಿದೆ.

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಮತದಾರರಿಗೆ ಭರಪೂರ ಕೊಡುಗೆ ಘೋಷಿಸಿರುವ ಡಿಎಂಕೆ, ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಕಣಕ್ಕಿಳಿಸಿದೆ.

ಡಿಎಂಕೆ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇಂಡಿಯಾ ಮೈತ್ರಿಕೂಟ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಹಲವು ಮಹತ್ವದ ಬದಲಾವಣೆ ತರುತ್ತೇವೆ. ಪ್ರಮುಖವಾಗಿ ದೇಶದಲ್ಲಿ ರಾಜ್ಯ ಸರ್ಕಾರಗಳ ಆಳ್ವಿಕೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪ, ಮಧ್ಯಪ್ರವೇಶಕ್ಕೆ ಇರುವ ಹಕ್ಕು, ಅಧಿಕಾರಗಳನ್ನು ರದ್ದು ಮಾಡುತ್ತೇವೆ. ರಾಜ್ಯಪಾಲರ ಹಕ್ಕು ರದ್ದಿಗೆ ಸಂವಿಧಾನ ತಿದ್ದುಪಡಿಯ ಭರವಸೆಯನ್ನು ತರುತ್ತೇವೆ ಎಂದು ಘೋಷಿಸಿದೆ. ಅಲ್ಲದೆ ದೇಶಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಪಡಿಸುವ ಭರವಸೆಯನ್ನು ಡಿಎಂಕೆ ನಾಯಕರು ನೀಡಿದ್ದಾರೆ.

Advertisements

ಅಲ್ಲದೇ, ಸಾಮಾನ್ಯ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ₹75ಕ್ಕೆ ಪೆಟ್ರೋಲ್, ₹65ಕ್ಕೆ ಡೀಸೆಲ್ ಹಾಗೂ ₹500 ರೂಪಾಯಿಗೆ ಸಿಲಿಂಡರ್ ನೀಡುವುದಾಗಿ ಘೋಷಿಸಿದೆ. ಜಾತಿ ಗಣತಿ ನಡೆಸಲಾಗುವುದು ಮತ್ತು ರಾಜ್ಯದಲ್ಲಿ ಆಶ್ರಯ ಪಡೆದಿರುವ ಶ್ರೀಲಂಕಾ ತಮಿಳರಿಗೆ ಪೌರತ್ವ ನೀಡುವುದಾಗಿ ಪಕ್ಷ ಭರವಸೆ ನೀಡಿದೆ.

ಡಿಎಂಕೆ ಪ್ರಣಾಳಿಕೆಯ ಪ್ರಮುಖ ಅಂಶಗಳು ಹೀಗಿದೆ:

1. ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೆ ತರುವುದಿಲ್ಲ.

2. ಅಡುಗೆ ಗ್ಯಾಸ್ ಸಿಲೆಂಡರ್ ₹500, ಪೆಟ್ರೋಲ್ ಲೀಟರ್‌ಗೆ ₹75 ಮತ್ತು ಡೀಸೆಲ್ 65 ರೂಪಾಯಿಗೆ ಮಾರಾಟ

3. ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಹಾಗೂ ನೀಟ್ ಪರೀಕ್ಷೆ ಜಾರಿಗೆ ತರುವುದಿಲ್ಲ

4. ಪುದುಚೇರಿಗೆ ರಾಜ್ಯದ ಸ್ಥಾನಮಾನ

5. ತಿರುಕುರಳ್ ಅನ್ನು ರಾಷ್ಟ್ರೀಯ ಪುಸ್ತಕ ಎಂದು ಘೋಷಣೆ

6. ಸಂಸತ್ ಮತ್ತು ಅಸೆಂಬ್ಲಿಯಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ

7. ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಯಲ್ಲಿ ತಮಿಳು ಭಾಷೆಯಲ್ಲಿ ಬರೆಯಲು ಅವಕಾಶ

8. ರೈಲ್ವೆ ಇಲಾಖೆಗೆ ಪ್ರತ್ಯೇಕ ಹಣಕಾಸು ನೀತಿ ಜಾರಿ

8. ಶ್ರೀಲಂಕಾದಿಂದ ಮರಳಿರುವ ತಮಿಳಿಗರಿಗೆ ಭಾರತದ ನಾಗರಿಕತ್ವ

10. ಬಡ ಮಹಿಳೆಯರಿಗೆ ತಿಂಗಳಿಗೆ 1000 ರೂಪಾಯಿ ನಗದು ವಿತರಣೆ

11. ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ

12. ಎಂ ಎಸ್ ಸ್ವಾಮಿನಾಥನ್ ಸಮಿತಿಯ ಶಿಫಾರಸು ಜಾರಿ: ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ

ಡಿಎಂಕೆ ಚುನಾವಣಾ ಪ್ರಣಾಳಿಕೆಯ ಜೊತೆಗೆ ಸಿಎಂ ಎಂ.ಕೆ ಸ್ಟಾಲಿನ್ ಅವರು ಮೊದಲ ಹಂತದಲ್ಲಿ ಪಕ್ಷದ 16 ಲೋಕಸಭಾ ಕ್ಷೇತ್ರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಡಿಎಂಕೆ ಮಿತ್ರಪಕ್ಷಗಳಾದ ಕಾಂಗ್ರೆಸ್ (9), ವಿದುತಲೈ ಚಿರುತೈಗಲ್ ಕಚ್ಚಿ (2), ಸಿಪಿಐ (2), ಸಿಪಿಐಗಳೊಂದಿಗೆ 39 ಲೋಕಸಭಾ ಕ್ಷೇತ್ರಗಳಲ್ಲಿ 21 ರಲ್ಲಿ ಸ್ಪರ್ಧಿಸುತ್ತಿದೆ.

ಇದನ್ನು ಓದಿದ್ದೀರಾ? ಕೇರಳ | ಅಭ್ಯರ್ಥಿ ಇಲ್ಲದೆಯೇ ಮೋದಿ ರೋಡ್‌ಶೋ; ‘ನನ್ನ ಕರೆದಿಲ್ಲ’ ಎಂದ ಸಲಾಮ್!

ದಕ್ಷಿಣ ಚೆನ್ನೈಯಿಂದ ತಂಗಪಾಡ್ಯನ್, ಸೆಂಟ್ರಲ್ ಚೆನ್ನೈಯಿಂದ ದಯಾನಿಧಿ ಮಾರನ್, ಶ್ರೀಪೆರಂಬೂರುನಿಂದ ಟಿ.ಆರ್.ಬಾಲು, ತಿರುವಣ್ಣಾಮಲೈನಿಂದ ಅಣ್ಣಾದೊರೈ, ನೀಲಗಿರಿಯಿಂದ ಎ.ರಾಜಾ, ತೂತುಕುಡಿಯಿಂದ ಕನ್ನಿಮೊಳಿ, ಉತ್ತರ ಚೆನ್ನೈಯಿಂದ ಕಲಾನಿಧಿ ವೀರಸ್ವಾಮಿ ಮುಂತಾದ ಪ್ರಮುಖರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X