ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

Date:

Advertisements

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಭರ್ಜರಿ ಮತದಾನ ನಡೆದಿದೆ. ಬಿಸಿ ಗಾಳಿಯ ನಡುವೆಯೂ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮೊದಲ ಬಾರಿಗೆ ಮತದಾನ ಮಾಡುವ ಮೂಲಕ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಗ್ರೇಟ್ ನಿಕೋಬಾರ್‌ನ ಶೋಂಪೆನ್ ಬುಡಕಟ್ಟಿನ ಬಸ್ತಾರ್‌ನಲ್ಲಿರುವ 56 ಗ್ರಾಮಗಳು ಮೊದಲ ಬಾರಿಗೆ ಮತ ಚಲಾಯಿಸಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

21 ರಾಜ್ಯದ 102 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ ನಡೆದ ಬಗ್ಗೆ ವರದಿಯಾಗಿದೆ. 20 ಶಾಸಕರು ಒಳಗೊಂಡತೆ 4 ಲಕ್ಷ ಮತದಾರರು ಮತಗಟ್ಟೆಗೆ ಬರಲಿಲ್ಲ. ನಾಗಾ ಬುಡಕಟ್ಟಿನ ಜನ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದಾರೆ. 8 ಕೇಂದ್ರ ಸಚಿವರು ಸೇರಿ 1,625 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.

Advertisements
eci 3
ರಾತ್ರಿ 7 ಗಂಟೆಗೆ ಚುನಾವಣಾ ಆಯೋಗ ಮಾಧ್ಯಮಗಳಿಗ ಬಿಡುಗಡೆ ಮಾಡಿದ ಮತ ಪ್ರಮಾಣದ ವಿವರ

ಚುನಾವಣಾ ಆಯೋಗವು ರಾತ್ರಿ 7 ಗಂಟೆಗೆ ಮಾಧ್ಯಮಗಳಿಗ ಬಿಡುಗಡೆ ಮಾಡಿದ ಮತ ಪ್ರಮಾಣದ ವಿವರದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ 77.57 ಶೇಕಡಾದಷ್ಟು ಮತ ಚಲಾವಣೆಯಾಗಿದೆ. ಬಿಹಾರದಲ್ಲಿ 47.49 ಶೇ. ಮತದಾನ ನಡೆದಿರುವುದಾಗಿ ಮಾಹಿತಿ ಹಂಚಿಕೊಂಡಿದೆ. ಒಟ್ಟು ಶೇ.60ರಷ್ಟು ಮತ ಚಲಾವಣೆಯಾಗಿರುವುದಾಗಿ ಆಯೋಗ ತಿಳಿಸಿದೆ.

ಮತದಾನ 18

ತಮಿಳುನಾಡಲ್ಲಿ ಸಿಎಂ ಸ್ಟಾಲಿನ್, ಎಡಪ್ಪಾಡಿ ಪಳನಿಸ್ವಾಮಿ, ಚಿದಂಬರಂ, ಅಣ್ಣಾಮಲೈ, ತಮಿಳ್‌ಸೈ ಸೌಂದರರಾಜನ್, ಸೂಪರ್‌ಸ್ಟಾರ್ ರಜನಿಕಾಂತ್, ಕಮಲ್‌ಹಾಸನ್, ಅಜಿತ್, ವಿಜಯ್ ಸೇರಿ ಹಲವರು ಮತದಾನ ಮಾಡಿದರು.

ಮಹಾರಾಷ್ಟ್ರದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಾಖಂಡದಲ್ಲಿ ಸಿಎಂ ಪುಷ್ಕರ್‌ಸಿಂಗ್ ಧಾಮಿ, ಬಾಬಾ ರಾಮ್‌ದೇವ್, ರಾಜಸ್ಥಾನದಲ್ಲಿ ಡಿಸಿಎಂ ದಿಯಾ ಕುಮಾರಿ, ಮಣಿಪುರದಲ್ಲಿ ಸಿಎಂ ಬೀರೇನ್ ಸಿಂಗ್, ಅಸ್ಸಾಂನಲ್ಲಿ ಸರ್ಬಾನಂದ ಸೋನಾವಾಲ್ ಹಕ್ಕು ಚಲಾಯಿಸಿದರು.

ಚುನಾವಣೆ ವೇಳೆ ಅಲ್ಲಲ್ಲಿ ಹಿಂಸಾಚಾರ ನಡೆದಿವೆ. ಮಣಿಪುರದ ಇಂಫಾಲದಲ್ಲಿ ಮತಗಟ್ಟೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮತದಾರರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಬಂಗಾಳದ ಚಂದ್ಮರಿ, ಕೂಚ್‌ಬೆಹಾರ್‌ನಲ್ಲಿ ಕಲ್ಲು ತೂರಾಟ ನಡೆದಿದೆ. ದಿನ್‌ಹಟಾದಲ್ಲಿ ಟಿಎಂಸಿ ಕಾರ್ಯಕರ್ತರು ಬಾಂಬ್ ಎಸೆದಿದ್ದಾರೆ. ಇತ್ತ ಛತ್ತೀಸ್‌ಘಡದ ಬಿಜಾಪುರ್‌ನಲ್ಲಿ ಮತಗಟ್ಟೆ ಸಮೀಪ ಗ್ರೆನೇಡ್ ಸ್ಫೋಟಗೊಂಡಿದೆ. ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X