ವಾಟ್ಸಾಪ್ ಮೂಲಕ ಪ್ರಧಾನಿಯ ‘ವಿಕಸಿತ್ ಭಾರತ್ ಸಂದೇಶ’ಕ್ಕೆ ಚುನಾವಣಾ ಆಯೋಗ ತಡೆ

Date:

Advertisements

ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾದ ಬಳಿಕವೂ ವಾಟ್ಸಾಪ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ‘ವಿಕಸಿತ್ ಭಾರತ್’ ಸಂದೇಶವನ್ನು ತಕ್ಷಣವೇ ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೇಂದ್ರ ಚುನಾವಣಾ ಆಯೋಗವು ಸೂಚಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಬಳಿಕವೂ ತಮಗೆ ವಾಟ್ಸಾಪ್ ಮೂಲಕ ಪ್ರಧಾನಿಯವರ ಪಿಡಿಎಫ್ ಪತ್ರವಿರುವ ಸಂದೇಶಗಳು ಬರುತ್ತಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹಲವಾರು ದೂರುಗಳು ಚುನಾವಣಾ ಆಯೋಗಕ್ಕೆ ಬಂದ ಹಿನ್ನೆಲೆಯಲ್ಲಿ, ತಕ್ಷಣವೇ ‘ವಿಕಸಿತ್ ಭಾರತ್’ ಸಂದೇಶವನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಪತ್ರ ಬರೆದಿದ್ದ ಆಯೋಗವು, ಉತ್ತರ ನೀಡುವಂತೆ ತಿಳಿಸಿತ್ತು. ಇದಕ್ಕೆ ಉತ್ತರಿಸಿರುವ ಸಚಿವಾಲಯವು, “ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ಈ ಸಂದೇಶಗಳನ್ನು ಕಳುಹಿಸಲಾಗಿದ್ದರೂ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಕೆಲವರಿಗೆ ವಿಳಂಬವಾಗಿ ತಲುಪಿರಬಹುದು” ಎಂದು ತಿಳಿಸಿರುವುದಾಗಿ ಆಯೋಗ ಮಾಹಿತಿ ನೀಡಿದೆ.

Advertisements

ಏನಿದು ಬೆಳವಣಿಗೆ?

ಲೋಕಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸುವ ಮುನ್ನಾದಿನದಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ವಾಟ್ಸಾಪ್ ಮೂಲಕ ಪತ್ರವೊಂದನ್ನು ಬಿಡುಗಡೆ ಮಾಡಿತ್ತು. ಆ ಪತ್ರದಲ್ಲಿ  ಸಮೃದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಈಡೇರಿಸುವಲ್ಲಿ ಸಲಹೆಗಳು ಮತ್ತು ಬೆಂಬಲವನ್ನು ಪ್ರಧಾನಿ ಮೋದಿ ಕೋರಿರುವುದಾಗಿ ತಿಳಿಸಿತ್ತು. ಭಾರತೀಯರಿಗೆ ಈ ಸಂದೇಶ ಆಶ್ಚರ್ಯವೆನಿಸದಿದ್ದರೂ, ಭಾರತೀಯರಲ್ಲದವರಿಗೂ ಈ ಸಂದೇಶ ತಲುಪಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.

ಯುಎಇಯಲ್ಲಿರುವ ಭಾರತೀಯ, ಪಾಕಿಸ್ತಾನ, ಬ್ರಿಟನ್ ವಲಸಿಗರ ಸ್ಮಾರ್ಟ್‌ಫೋನ್‌ಗಳಿಗೆ ಕಳೆದ ವಾರಾಂತ್ಯದಲ್ಲಿ ಭಾರತೀಯ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ಆಶ್ಚರ್ಯಗೊಂಡಿದ್ದರು.

ಇದನ್ನು ಓದಿದ್ದೀರಾ? ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

ದುಬೈ ಮೂಲದ ಪಾಕಿಸ್ತಾನಿ ಪತ್ರಕರ್ತೆ ಅಸ್ಮಾ ಝೈನ್ ತನಗೆ ಭಾರತ ಸರ್ಕಾರದಿಂದ ಬಂದ ಸಂದೇಶದ ಬಗ್ಗೆ ಮಾತನಾಡುತ್ತಾ, “ನನಗೆ ಮಧ್ಯರಾತ್ರಿ ಈ ಸಂದೇಶ ಬಂದಿದೆ. ಇದು ನನಗೆ ಆಶ್ಚರ್ಯವನ್ನುಂಟು ಮಾಡಿದೆ. ಸನ್ಮಾನ್ಯ ಮೋದಿ ಅವರಿಗೆ ನನ್ನಿಂದ ಯಾವ ರೀತಿಯ ಸಲಹೆಗಳು ಬೇಕಾಗಬಹುದು? ಅದಕ್ಕಿಂತ ಮುಖ್ಯವಾಗಿ ನಾನು ಆ ಸಲಹೆಗಳನ್ನು ನೀಡಬೇಕೆ? ಎಂಬ ಪ್ರಶ್ನೆ ಮೂಡಿತು” ಎಂದಿದ್ದರು. ಯುಎಇಯಲ್ಲಿರುವ ಇನ್ನೋರ್ವ ಪಾಕಿಸ್ತಾನಿ ಫಹಾದ್ ಸಿದ್ದೀಕಿ, “ಇದು ತುಂಬಾ ವಿಚಿತ್ರವಾಗಿದೆ. ನಮ್ಮ ಖಾಸಗಿತನಕ್ಕೆ ಧಕ್ಕೆ”ಎಂದು ಟೀಕಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X