ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪ್ರಕಾಶ್ ಮೂರ್ತಿ ಅವರ ಅಭಿಪ್ರಾಯ
ಮತ ಚಲಾವಣೆ ಎಷ್ಟು ಮುಖ್ಯ?
ಬಹುಜನರ ಅಭಿಪ್ರಾಯಗಳನ್ನು ಆಧರಿಸಿ, ಉತ್ತಮ ಆಡಳಿತ ನಡೆಸುವ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತ ಚಲಾವಣೆ ಮಾಡುವುದು ಬಹಳ ಮುಖ್ಯ.
ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಬಹುತ್ವವನ್ನು ಒಳಗೊಂಡಿರುವ ನಮ್ಮ ಸಮಾಜವನ್ನು, ಜತನದಿಂದ ಮುನ್ನಡೆಸುವ ಸರ್ಕಾರವನ್ನು ಆಯ್ಕೆ ಮಾಡಬೇಕಾಗಿರುವ ಕಾರಣದಿಂದ ಹಿಂದೆಂದಿಗಿಂತಲೂ ಈ ಬಾರಿಯ ಚುನಾವಣೆ ಬಹಳಷ್ಟು ಮುಖ್ಯ.
ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ನಾಡನ್ನು ಭೌಗೋಳಿಕವಾಗಿ ಹಾಗೂ ಬೌದ್ಧಿಕವಾಗಿ ಅಭಿವೃದ್ಧಿ ಹೊಂದುವಂತೆ ಆಡಳಿತ ನಡೆಸುವ ಸರ್ಕಾರ ಬರಬೇಕಿದೆ.