ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಅಭಿಪ್ರಾಯಗಳು ಪ್ರಕಟವಾಗಲಿವೆ. ಇಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅವರ ಅಭಿಮತ
ಮತ ಚಲಾವಣೆ ಎಷ್ಟು ಮುಖ್ಯ?
ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿಸಬೇಕಾದರೆ ಪ್ರತಿಯೊಬ್ಬರೂ ತಮ್ಮ ಸಾರ್ವಭೌಮತೆ ಸಾರುವ ಭಾಗವಾಗಿ ಮತ ಚಲಾಯಿಸಬೇಕು. ಮತ ಚಲಾಯಿಸುವುದೆಂದರೆ ಸಂವಿಧಾನವನ್ನು ಎತ್ತಿ ಹಿಡಿಯುವುದು
ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಸಂಕುಚಿತ ಕೋಮುವಾದಿ ನೆಲೆಯ ರಾಷ್ಟ್ರೀಯತೆ ಮೇಲುಗೈ ಸಾಧಿಸುತ್ತಿರುವ ಈ ಸಂದರ್ಭದಲ್ಲಿ, ಸಾಂವಿಧಾನಿಕ ನೆಲೆಯ ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುತ್ತಲೇ ಸಂವಿಧಾನವನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.
ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ತಾನು ಈ ಹಿಂದೆ ಮಾಡಿದ ತಪ್ಪುಗಳನ್ನು ಪುನರಾವರ್ತಿಸದೆ ಜನಪರ ಸರಕಾರವಾಗಿ ಕೆಲಸ ಮಾಡಬೇಕು. ಸಾರ್ವಜನಿಕ ಶಿಕ್ಷಣ ಹಾಗು ಆರೋಗ್ಯ ಗಟ್ಟಿಗೊಳಿಸುವ, ರೈತರ ಬೆಳೆಗೆ ಕನಿಷ್ಠ ಬೆಲೆ ನಿಗದಿಗೊಳಿಸುವ, ಮಹಿಳೆಯರ ಘನತೆ ಹೆಚ್ಚಿಸುವ ಕಾರ್ಯಕ್ರಮಗಳು ಆದ್ಯತೆಯ ಕಾರ್ಯಕ್ರಮಗಳಾಗಬೇಕು.