ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗುತ್ತದೆ. ಇಲ್ಲಿದೆ ಹಿರಿಯ ಲೇಖಕಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಡಾ ಎಚ್ ಎಲ್ ಪುಷ್ಪಾ ಅವರ ಅಭಿಪ್ರಾಯ
ಮತ ಚಲಾವಣೆ ಎಷ್ಟು ಮುಖ್ಯ?
ಉತ್ತಮರನ್ನು ಅಧಿಕಾರಕ್ಕೆ ತರಲು ನಮ್ಮ ಒಂದೊಂದು ಮತವೂ ಚಲಾವಣೆಯಾಗುವುದು ಬಹಳ ಮುಖ್ಯ
ಈ ಬಾರಿ ಚುನಾವಣೆ ಏಕೆ ಮುಖ್ಯ?
ಜನಸಾಮಾನ್ಯರ ಬದುಕಿನ ಮೌಲ್ಯ, ಸಂಸ್ಕ್ರತಿ, ಚರಿತ್ರೆ, ರಾಜಕಾರಣವನ್ನು ತನ್ನ ಮೂಗಿನ ನೇರಕ್ಕೆ ತಕ್ಕಂತೆ ರೂಪಿಸಲು ಹೊರಟಿರುವ ಲಜ್ಜೆಗೇಡಿನ ಭ್ರಷ್ಟ ರಾಜಕಾರಣವನ್ನು ಹೋಗಲಾಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ಚುನಾವಣೆ ಮುಖ್ಯ.
ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ಜನಸಾಮಾನ್ಯರ ಬದುಕಿನ ಒಳಗೆ ಅತಿಕ್ರಮ ಪ್ರವೇಶ ಮಾಡದೆ ಅವರ ಹಿತಾಸಕ್ತಿಯನ್ನು ಕಾಪಾಡುವಂತಿದ್ದರೆ ಸಾಕು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.